Advertisement
MIRROR FOCUS

ಉಚಿತ ವಿದ್ಯುತ್ ಬೆನ್ನಲ್ಲೆ ರೈತರಿಗೆ ಪವರ್ ಶಾಕ್ | ಲಕ್ಷ ಲಕ್ಷ ಬಿಲ್ ನೀಡಿದ ವಿದ್ಯುತ್ ಇಲಾಖೆ

Share

ಒಂದೆಡೆ ಉಚಿತ ವಿದ್ಯುತ್ ( free electricity) ನೀಡುತ್ತಿದ್ದೇವೆ ಎನ್ನುತ್ತಿರುವ ಸರ್ಕಾರ ಮತ್ತೊಂದೆಡೆ ರೈತರಿಂದ ದುಪ್ಪಟ್ಟು ವಿದ್ಯುತ್ ಬಿಲ್ ( current bill) ವಸೂಲಿಗೆ ಇಳಿದಿದೆ.ಏನಿದು ಕತೆ.. ಇಲ್ಲಿದೆ ಓದಿ…

Advertisement
Advertisement
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗೃಹಜ್ಯೋತಿ ಯೋಜನೆ(gruhajyothi scheme) ಜಾರಿಗೊಳಿಸಿ 200 ಯೂನಿಟ್‍ವರೆಗೆ ಉಚಿತ ಕರೆಂಟ್ ನೀಡುವ ಕೊಟ್ಟ ಭರವಸೆ ಈಡೇರಿಸಿದೆ. ಆದ್ರೆ ಗ್ರಾಮೀಣ ಭಾಗಗಳಲ್ಲಿ ಬೇರೆ ರೀತಿಯ ಚಿತ್ರಣವಿದೆ. ತೀವ್ರ ಬರಗಾಲದಿಂದ ಬೆಳೆಗಳೆಲ್ಲಾ ನಾಶವಾಗಿ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ ಉಳಿದಿರೋ ಅಲ್ಪಸ್ವಲ್ಪ ಬೆಳೆಗಳನ್ನು ಉಳಿಸಿಕೊಳ್ಳಲು ಪಂಪ್‍ಸೆಟ್ ಹೊಂದಿರುವ ರೈತರು, ವಿದ್ಯುತ್ ಇಲಾಖೆ ನೀಡ್ತಿರೋ ಒಂದೆರಡು ಗಂಟೆ ಕರೆಂಟ್‍ನಲ್ಲೇ ಬೆಳೆಗಳಿಗೆ ನೀರು ಹಾಯಿಸುತ್ತಿದ್ದಾರೆ. ಪಂಪ್‍ಸೆಟ್‍ಗಳನ್ನು ಹೊಂದಿರುವ ರೈತರಿಗೆ ವಿದ್ಯುತ್ ಇಲಾಖೆ ಶಾಕ್ ನೀಡಿದೆ. ಲಕ್ಷ ಲಕ್ಷ ಮೊತ್ತದ ಕರೆಂಟ್ ಬಿಲ್ ನೀಡಿದ್ದು, ಇನ್ನು 15 ದಿನಗಳಲ್ಲಿ ಬಿಲ್ ಪಾವತಿ ಮಾಡಬೇಕು ಎಂದು ವಾರ್ನಿಂಗ್ ನೀಡಿದೆ.
ಹಾಸನ (Hassan) ಜಿಲ್ಲೆಯಲ್ಲಿ ರೈತರು ಬಳಸುವ ಒಂದೂವರೆ ಲಕ್ಷಕ್ಕೂ ಅಧಿಕ ಪಂಪ್‍ಸೆಟ್‍ಗಳಿಗೆ ಸರ್ಕಾರ ಕರೆಂಟ್ ನೀಡುತ್ತಿದೆ. ಇದುವರೆಗೂ ಬಹುತೇಕ ಸರ್ಕಾರಗಳು ರೈತರ ಬೆಳೆಗಳಿಗೆ ಬಳಸುವ ವಿದ್ಯುತ್‍ಗೆ ಬಿಲ್ ನೀಡಿರಲಿಲ್ಲ. ಅದರಲ್ಲೂ ಕೃಷಿ ಬಳಕೆ ಪಂಪ್‍ಸೆಟ್‍ಗಳಿಗೆ ರೈತರು ಉಚಿತವಾಗಿಯೇ ಕರೆಂಟ್ ಬಳಕೆ ಮಾಡಿಕೊಳ್ಳುತ್ತಿದ್ದರು. ಕೆಲವು ರೈತರು ಇನ್ನೂ ಮೀಟರ್ ಅಳವಡಿಕೆ ಮಾಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಗೃಹಜ್ಯೋತಿ ಜಾರಿ ಮಾಡಿರುವ ಸರ್ಕಾರ ಸಣ್ಣ, ಅತಿಸಣ್ಣ ರೈತರು ತಮ್ಮ ಕೃಷಿ ಚಟುವಟಿಕೆಗೆ ಅಗತ್ಯಕ್ಕೆ ತಕ್ಕಂತೆ ಬಳಸುತ್ತಿರುವ ನೀರಾವರಿ ಪಂಪ್‍ಸೆಟ್‍ಗಳಿಗೆ ಲಕ್ಷ ಲಕ್ಷ ಬಿಲ್ ನೀಡಲು ಆರಂಭಿರುವುದು ರೈತರಿಗೆ ದೊಡ್ಡ ಆಘಾತ ಉಂಟು ಮಾಡಿದೆ.
ಸಕಲೇಶಪುರ, ಬೇಲೂರು ಸೇರಿದಂತೆ ಎಲ್ಲಾ ತಾಲೂಕುಗಳ ರೈತರಿಗೆ ದುಬಾರಿ ಬಿಲ್ ಮೂಲಕ ಬರೆ ಎಳೆಯುತ್ತಿದೆ. ಹತ್ತಾರು ವರ್ಷಗಳಿಂದ ಕೆಲ ರೈತರು ಬಿಲ್ ಪಾವತಿ ಮಾಡಿಲ್ಲ. ಅಂತಹವರನ್ನು ಸೇರಿಸಿ ಎಲ್ಲಾ ರೈತರ ಪಂಪ್‍ಸೆಟ್‍ಗಳಿಗೆ ಎರಡೂವರೆ ಲಕ್ಷ, ಒಂದು ಲಕ್ಷ, ಐವತ್ತು ಸಾವಿರ ಹೀಗೆ ಮನಬಂದಂತೆ ಬಿಲ್ ನೀಡಿದ್ದಾರೆ. ಈ ವರ್ಷ ಬರಗಾಲದಿಂದ ಬೆಳೆ ಕಳೆದುಕೊಂಡು ಕಂಗಾಲಾಗಿದ್ದೀವಿ. ಈ ವೇಳೆ ಹೇಗೆ ಬಿಲ್ ಕಟ್ಟೋದು ಎನ್ನುತ್ತಿದ್ದಾರೆ.
ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಈಡೇರಿಸಲು ಗೃಹಜ್ಯೋತಿ ಜಾರಿಗೊಳಿಸಿ ಮನೆಮನೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. 200 ಯೂನಿಟ್ ವಿದ್ಯುತ್ ಉಚಿತ ಸಿಗುತ್ತಿದೆ ಎಂದು ಜನರು ಖಷಿಯಲ್ಲಿರುವಾಗ ಪಂಪ್‍ಸೆಟ್‍ಗಳಿಗೆ ದುಬಾರಿ ಬಿಲ್ ನೀಡುವ ಮೂಲಕ ರೈತರಿಂದ ಹಣ ವಸೂಲಿ ಮಾಡಲು ಮುಂದಾಗಿರೋದು ರೈತರ ಕಣ್ಣು ಕೆಂಪಾಗಿಸಿದೆ.
– ಅಂತರ್ಜಾಲ ಮಾಹಿತಿ
The Congress Govt came to power on a whim. Among the five guarantees given during the election, Griha Jyoti, Grilahakshmi, Shakti and Annabhagya schemes have been implemented. But after the implementation of Griha Jyoti Yojana which gives free electricity, there are still many discussions going on. On the one hand, the government claims to be providing free electricity, on the other hand, it has come down to collecting double electricity bills from the farmers.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನತದೃಷ್ಟ ರೈತರ ಕೋರಿಕೆ ಈಡೇರಿಸುವವರು ಯಾರು..!? : ಅಡಿಕೆ ಮಾರುಕಟ್ಟೆ ವ್ಯವಸ್ಥೆ ಹಾಗೂ ಹವಾಮಾನ ಇಲಾಖಗೆ ಕೃತಜ್ಞತೆಗಳು

ರೈತ(Farmer) ನತದೃಷ್ಟರ ಕೋರಿಕೆ ಈಡೇರಿಸುವವರು....!? ಹೌದು.... ನಮ್ಮಂಥ ಸಣ್ಣಪುಟ್ಟ ರೈತರಿಗೆ ದೇವರೂ(God) ದಿಂಡರೂ…

3 hours ago

ಪ್ರಸಾದದ ರೂಪದಲ್ಲಿ ಭಕ್ತರಿಗೆ ಗಿಡಗಳ ಹಂಚಿಕೆ : ಅಂಕೋಲಾದ ಪುರಾತನ ದೇವಸ್ಥಾನ ವಿಶೇಷ ಪರಿಸರ ಕಾಳಜಿ

ಜೂನ್‌(June) ತಿಂಗಳು ಬಂತೆಂದರೆ ಪರಿಸರದ(Environment) ಬಗ್ಗೆ ಕಾಳಜಿ ಆರಂಭವಾಗುತ್ತದೆ. ಎಲ್ಲಿ ನೋಡೊದರಲ್ಲಿ ಗಿಡ…

3 hours ago

ಮುಂಗಾರು ಆರಂಭವಾಗುತ್ತಿದ್ದಂತೆ ಏರಿದ ತರಕಾರಿ ಬೆಲೆ : ಗಗನಕ್ಕೇರಿದ ಬೀನ್ಸ್‌ ದರ : ಬಡವರ ಪಾಡೇನು..?

ಬರಗಾಲ(Drought) ಬಂದರೆ ಮಳೆ(Rain) ಇಲ್ಲದೆ ತರಕಾರಿ ರೇಟ್‌(Vegetable rate) ಗಗನಕ್ಕೆ ಹಾರುತ್ತದೆ. ಅದೇ…

4 hours ago

ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಜಾಗಗಳ ರಕ್ಷಣೆಗಾಗಿ ಕ್ರಮ : ಪಹಣಿದಾರರ ಜಮೀನುಗಳ ರಕ್ಷಣೆಗಾಗಿ ಲ್ಯಾಂಡ್ ಬೀಟ್ ಮತ್ತು ಆಧಾರ್ ಲಿಂಕ್ ಕಾರ್ಯ

ದೇಶದಲ್ಲಿ ಮೊದಲು ಸರ್ಕಾರಿ ಜಮೀನುಗಳ(Govt land) ಮೇಲೆ ಕಣ್ಣು ಹಾಕುವುದನ್ನು ತಪ್ಪಿಸಬೇಕು. ಇದಕ್ಕೆ…

4 hours ago

ವಿದ್ಯುತ್ ಸ್ಪರ್ಶದಿಂದ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಸಾವು : ತನಿಖೆಗೆ ಅರಣ್ಯ ಸಚಿವ ಖಂಡ್ರೆ ಸೂಚನೆ

ಇತ್ತೀಚೆಗೆ ಪ್ರಾಣಿಗಳು(Animal) ಕ್ಷುಲ್ಲಕ ಕಾರಣಕ್ಕೆ ಬಲಿಯಾಗುತ್ತಿವೆ(Death). ಅದರಲ್ಲೂ ಆನೆಗಳ(Elephant) ಸಾವು ಮೇಲಿಂದ ಮೇಲೆ…

4 hours ago

ವೆದರ್‌ ಮಿರರ್‌ | 12.06.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ

13.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

5 hours ago