ಆರಂಭವಾಯಿತು ಚುನಾವಣಾ ಘೋಷಣೆ | ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 200 ಯುನಿಟ್‌ ಉಚಿತ ವಿದ್ಯುತ್‌ |

January 13, 2023
9:28 PM

ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ  ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ, ನಿಮ್ಮ ಮನೆಗಳಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವುದು. ಮಹಿಳೆಯರು, ಯುವಕರು, ರೈತರು 200 ಯೂನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ನಡೆಯುತ್ತೇವೆ. ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ
ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror