Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಪವರ್‌ ಮ್ಯಾನ್‌ ಕೆಲಸ | ಹರಿಹರದಲ್ಲಿ ಹೊಳೆಗೆ ಬಿದ್ದ ವಯರ್‌ | ಊರವರ ಶ್ಲಾಘನೆ ಕಾರಣ ಇದೆ ಇಲ್ಲಿ… |

Share

ಗ್ರಾಮೀಣ ಭಾಗದಲ್ಲಿ ನಿರಂತರ ವಿದ್ಯುತ್‌ ಸರಬರಾಜು ಮಾಡುವುದು  ಸುಲಭ ಮಾತಲ್ಲ. ಯಾವುದೇ ದೂರು ವಿಭಾಗ ಇದ್ದರೂ ಗ್ರಾಮೀಣ ಭಾಗದಲ್ಲಿ ಯಾರಿಗೇ ಆದರೂ ಕೆಲಸ ಮಾಡಲು ಮನಸ್ಸು ಹಾಗೂ ಶಕ್ತಿ ಮತ್ತು ಯುಕ್ತಿ ಅಗತ್ಯವಿದೆ. ಅಂತಹ ಯುಕ್ತಿಯ ಹಾಗೂ ಸಾಹಸದ ತಂಡವೊಂದು ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಪ್ರದೇಶದಲ್ಲಿದೆ.

ಕಳೆದ ಬಾರಿ ಮಳೆ ಹಾಗೂ ಭಾರೀ ಪ್ರವಾಹವು ಕಲ್ಮಕಾರಿನಿಂದ ತೊಡಗಿ ಕೊಲ್ಲಮೊಗ್ರ, ಹರಿಹರ ಪ್ರದೇಶದಲ್ಲಿ ಸಂಕಷ್ಟ ತಂದಿತ್ತು. ವಿದ್ಯುತ್‌ ಕಂಬಗಳು ಉರುಳಿತ್ತು, ತಂತಿಗಳು ಬಿದ್ದಿದ್ದವು. ಆದರೆ ಇಲ್ಲಿನ ಮೆಸ್ಕಾಂ ತಂಡ ಹಾಗೂ ಖಾಸಗಿ ಕೆಲಸಗಾರರು ಮತ್ತು ಊರಿನ ಯುವಕರು ಹಾಗೂ ನಿತ್ಯಾನಂದ ಹರಿಹರ ಮತ್ತು ತಂಡದಿಂದ ಎರಡೇ ದಿನದಲ್ಲಿ ಇಡೀ ಊರಿಗೆ ವಿದ್ಯುತ್‌ ಸಂಪರ್ಕ ಒದಗುವಂತೆ ಮಾಡಿದ್ದರು. ಹೀಗಾಗಿ ಇಡೀ ಊರಿನ ಜನರು ಶ್ಲಾಘನೆ ವ್ಯಕ್ತಪಡಿಸಿದ್ದರು.

ಅದೇ ತಂಡ ಎರಡು ದಿನಗಳ ಹಿಂದೆ ಹರಿಹರ ಬಳಿಯ ಗುಂಡಡ್ಕ ಹೊಳೆಯಲ್ಲಿ ವೈರ್ ತುಂಡಾಗಿ ಬಿದ್ದಿತ್ತು ಅದನ್ನು ತಕ್ಷಣವೇ ದುರಸ್ತಿ ಮಾಡಿದ್ದಾರೆ. ಹರಿಹರದ ಪವರ್ ಮ್ಯಾನ್ ಗಳಾದ  ಪ್ರಶಾಂತ, ಮಾರುತಿ, ವಿಜಯ ಎಂಬ ಮೂರು ಜನರ ತಂಡ ನಿರಂತರ ಕೆಲಸ ಮಾಡಿದೆ. ಹರಿಹರ ಪಲ್ಲತ್ತಡ್ಕ ಎಂಬಲ್ಲಿ ವಯರ್ ತುಂಡಾಗಿ ಹೊಳೆಯಲ್ಲಿ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಾರಿ ಕೂಡಾ ಹೊಳೆಯಲ್ಲಿ ಈಜಿ ವಯರನ್ನು ಎಳೆದು ಕಟ್ಟಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ. ಇಂತಹ ಪವರ್‌ ಮ್ಯಾನ್‌ ಗಳೇ ಮೆಸ್ಕಾಂನ ನಿಜವಾದ ಆಸ್ತಿಗಳು ಎಂದು ಜನರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

49 minutes ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

4 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

13 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

14 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

14 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

21 hours ago