ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಪವರ್‌ ಮ್ಯಾನ್‌ ಕೆಲಸ | ಹರಿಹರದಲ್ಲಿ ಹೊಳೆಗೆ ಬಿದ್ದ ವಯರ್‌ | ಊರವರ ಶ್ಲಾಘನೆ ಕಾರಣ ಇದೆ ಇಲ್ಲಿ… |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಭಾಗದಲ್ಲಿ ನಿರಂತರ ವಿದ್ಯುತ್‌ ಸರಬರಾಜು ಮಾಡುವುದು  ಸುಲಭ ಮಾತಲ್ಲ. ಯಾವುದೇ ದೂರು ವಿಭಾಗ ಇದ್ದರೂ ಗ್ರಾಮೀಣ ಭಾಗದಲ್ಲಿ ಯಾರಿಗೇ ಆದರೂ ಕೆಲಸ ಮಾಡಲು ಮನಸ್ಸು ಹಾಗೂ ಶಕ್ತಿ ಮತ್ತು ಯುಕ್ತಿ ಅಗತ್ಯವಿದೆ. ಅಂತಹ ಯುಕ್ತಿಯ ಹಾಗೂ ಸಾಹಸದ ತಂಡವೊಂದು ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಪ್ರದೇಶದಲ್ಲಿದೆ.

Advertisement

ಕಳೆದ ಬಾರಿ ಮಳೆ ಹಾಗೂ ಭಾರೀ ಪ್ರವಾಹವು ಕಲ್ಮಕಾರಿನಿಂದ ತೊಡಗಿ ಕೊಲ್ಲಮೊಗ್ರ, ಹರಿಹರ ಪ್ರದೇಶದಲ್ಲಿ ಸಂಕಷ್ಟ ತಂದಿತ್ತು. ವಿದ್ಯುತ್‌ ಕಂಬಗಳು ಉರುಳಿತ್ತು, ತಂತಿಗಳು ಬಿದ್ದಿದ್ದವು. ಆದರೆ ಇಲ್ಲಿನ ಮೆಸ್ಕಾಂ ತಂಡ ಹಾಗೂ ಖಾಸಗಿ ಕೆಲಸಗಾರರು ಮತ್ತು ಊರಿನ ಯುವಕರು ಹಾಗೂ ನಿತ್ಯಾನಂದ ಹರಿಹರ ಮತ್ತು ತಂಡದಿಂದ ಎರಡೇ ದಿನದಲ್ಲಿ ಇಡೀ ಊರಿಗೆ ವಿದ್ಯುತ್‌ ಸಂಪರ್ಕ ಒದಗುವಂತೆ ಮಾಡಿದ್ದರು. ಹೀಗಾಗಿ ಇಡೀ ಊರಿನ ಜನರು ಶ್ಲಾಘನೆ ವ್ಯಕ್ತಪಡಿಸಿದ್ದರು.

ಅದೇ ತಂಡ ಎರಡು ದಿನಗಳ ಹಿಂದೆ ಹರಿಹರ ಬಳಿಯ ಗುಂಡಡ್ಕ ಹೊಳೆಯಲ್ಲಿ ವೈರ್ ತುಂಡಾಗಿ ಬಿದ್ದಿತ್ತು ಅದನ್ನು ತಕ್ಷಣವೇ ದುರಸ್ತಿ ಮಾಡಿದ್ದಾರೆ. ಹರಿಹರದ ಪವರ್ ಮ್ಯಾನ್ ಗಳಾದ  ಪ್ರಶಾಂತ, ಮಾರುತಿ, ವಿಜಯ ಎಂಬ ಮೂರು ಜನರ ತಂಡ ನಿರಂತರ ಕೆಲಸ ಮಾಡಿದೆ. ಹರಿಹರ ಪಲ್ಲತ್ತಡ್ಕ ಎಂಬಲ್ಲಿ ವಯರ್ ತುಂಡಾಗಿ ಹೊಳೆಯಲ್ಲಿ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಾರಿ ಕೂಡಾ ಹೊಳೆಯಲ್ಲಿ ಈಜಿ ವಯರನ್ನು ಎಳೆದು ಕಟ್ಟಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ. ಇಂತಹ ಪವರ್‌ ಮ್ಯಾನ್‌ ಗಳೇ ಮೆಸ್ಕಾಂನ ನಿಜವಾದ ಆಸ್ತಿಗಳು ಎಂದು ಜನರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

4 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು

ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ

ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.

ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್‌ ಆನ್ಸ್‌ ಶಾಲೆ ಕಡಬ | -…

6 hours ago

ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ

ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…

7 hours ago

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…

8 hours ago