ದೇಶದ ಅಭಿವೃದ್ಧಿಗೆ ಜನಸಾಮಾನ್ಯರು ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದುವುದು ಅಗತ್ಯ. ಇದಕ್ಕಾಗಿ ಆರೋಗ್ಯ ಸಂಬಂಧಿಯಾಗಿ ಕಡಿಮೆ ದರದಲ್ಲಿ ಉತ್ತಮ ಔಷಧಿ ದೊರೆಯುವ ವ್ಯವಸ್ಥೆ ಈ ದೇಶದಲ್ಲಿ ಆಗುತ್ತಿರುವುದು ಬದಲಾವಣೆಯ ಸಂಕೇತವಾಗಿದ್ದು ಪ್ರತೀ ವ್ಯಕ್ತಿಯ ಆರೋಗ್ಯ ಸುಧಾರಣೆಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಪೈವಳಿಕೆ ಪಂಚಾಯತ್ ನ ಬಾಯಾರಿನ ಬಾಯಾರುಪದವಿನಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತೀ ವ್ಯಕ್ತಿಯು ಆರ್ಥಿಕ ಮಟ್ಟ ಎತ್ತರಿಸುತ್ತಾ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.
ಅತಿಥಿಗಳಾಗಿದ್ದ ಡಾ| ಮುರಳೀಧರ್ ಶೆಟ್ಟಿ ಮಾತನಾಡಿ “ಈಗಿನ ಕಾಲದಲ್ಲಿ ಬದಲಾಗುತ್ತಿರುವ ಜನರ ಜೀವನ ಶೈಲಿಯಲ್ಲಿ ಔಷಧಗಳ ಅವಶ್ಯಕತೆ ಹೆಚ್ಚಾಗಿದ್ದು , ಜನೌಷಧಿಯು ಜನಸಾಮಾನ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು. ಜನೌಷಧಿಯಲ್ಲಿ ಬ್ರಾಂಡ್ ಬೇರೆಯಾಗಿದ್ದರೂ ಬೇರೆ ಕಂಪನಿಯಲ್ಲಿರುವ ಅದೇ ಅಂಶಗಳನ್ನು ಒಳಗೊಂಡಿರುತ್ತದೆ – ಪರಿಣಾಮಕಾರಿಯಾಗಿದೆ” ಎಂದು ಹೇಳಿದರು. ವಿಡಿಯೋ ವರದಿ ಇಲ್ಲಿದೆ.….
ಕಲ್ಲಡ್ಕ ಶೀರಾಮ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಕ್ರಷ್ಣಪ್ರಸಾದ ಕೆ ಎನ್ ಮತ್ತು ಪೈವಳಿಕೆ ಪಂಚಾಯತ್ ಹೆಲ್ತ್ ಮತ್ತು ಎಡ್ಯುಕೇಶನ್ ಸ್ಟ್ಯಾಂಡಿಂಗ್ ಕಮಿಟಿ ಚೇರ್ಮೇನ್ ಜೆಡ್ ಎ ಕಯ್ಯಾರ್ ಶುಭ ಹಾರೈಸಿದರು.
ಜನೌಷಧಿ ಕೇಂದ್ರದ ಮುಖ್ಯಸ್ಥ ವೆಂಕಟರವಿ ಕಳಂದೂರು ಸ್ವಾಗತಿಸಿ ರೂಪಲಕ್ಷ್ಮೀ ಕಳಂದೂರು ವಂದಿಸಿದರು. ಶಂಕರ ಭಟ್ ಉಳುವಾನ ಕಾರ್ಯಕ್ರಮ ನಿರ್ವಹಿಸಿದರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…