ಸುದ್ದಿಗಳು

ಬಾಯಾರಿನಲ್ಲಿ ಜನೌಷಧ ಕೇಂದ್ರ ಉದ್ಘಾಟನೆ | ದೇಶದ ಅಭಿವೃದ್ಧಿಗೆ ಜನಸಾಮಾನ್ಯರ ಅಭಿವೃದ್ಧಿಯೂ ಅವಶ್ಯ – ಡಾ.ಪ್ರಭಾಕರ ಭಟ್‌ ಕಲ್ಲಡ್ಕ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದ ಅಭಿವೃದ್ಧಿಗೆ ಜನಸಾಮಾನ್ಯರು ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದುವುದು  ಅಗತ್ಯ. ಇದಕ್ಕಾಗಿ ಆರೋಗ್ಯ ಸಂಬಂಧಿಯಾಗಿ ಕಡಿಮೆ ದರದಲ್ಲಿ  ಉತ್ತಮ ಔಷಧಿ ದೊರೆಯುವ ವ್ಯವಸ್ಥೆ ಈ ದೇಶದಲ್ಲಿ ಆಗುತ್ತಿರುವುದು  ಬದಲಾವಣೆಯ ಸಂಕೇತವಾಗಿದ್ದು  ಪ್ರತೀ ವ್ಯಕ್ತಿಯ ಆರೋಗ್ಯ ಸುಧಾರಣೆಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

Advertisement
Advertisement

ಅವರು ಪೈವಳಿಕೆ ಪಂಚಾಯತ್‌ ನ ಬಾಯಾರಿನ  ಬಾಯಾರುಪದವಿನಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತೀ ವ್ಯಕ್ತಿಯು ಆರ್ಥಿಕ ಮಟ್ಟ ಎತ್ತರಿಸುತ್ತಾ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.

ಅತಿಥಿಗಳಾಗಿದ್ದ ಡಾ| ಮುರಳೀಧರ್ ಶೆಟ್ಟಿ  ಮಾತನಾಡಿ “ಈಗಿನ ಕಾಲದಲ್ಲಿ ಬದಲಾಗುತ್ತಿರುವ ಜನರ ಜೀವನ ಶೈಲಿಯಲ್ಲಿ ಔಷಧಗಳ ಅವಶ್ಯಕತೆ ಹೆಚ್ಚಾಗಿದ್ದು , ಜನೌಷಧಿಯು ಜನಸಾಮಾನ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು. ಜನೌಷಧಿಯಲ್ಲಿ ಬ್ರಾಂಡ್ ಬೇರೆಯಾಗಿದ್ದರೂ ಬೇರೆ ಕಂಪನಿಯಲ್ಲಿರುವ ಅದೇ ಅಂಶಗಳನ್ನು ಒಳಗೊಂಡಿರುತ್ತದೆ – ಪರಿಣಾಮಕಾರಿಯಾಗಿದೆ” ಎಂದು ಹೇಳಿದರು. ವಿಡಿಯೋ ವರದಿ ಇಲ್ಲಿದೆ.….

Advertisement

ಕಲ್ಲಡ್ಕ ಶೀರಾಮ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಕ್ರಷ್ಣಪ್ರಸಾದ ಕೆ ಎನ್ ಮತ್ತು ಪೈವಳಿಕೆ ಪಂಚಾಯತ್  ಹೆಲ್ತ್ ಮತ್ತು ಎಡ್ಯುಕೇಶನ್ ಸ್ಟ್ಯಾಂಡಿಂಗ್ ಕಮಿಟಿ  ಚೇರ್ಮೇನ್  ಜೆಡ್ ಎ ಕಯ್ಯಾರ್ ಶುಭ ಹಾರೈಸಿದರು.

ಜನೌಷಧಿ ಕೇಂದ್ರದ ಮುಖ್ಯಸ್ಥ  ವೆಂಕಟರವಿ ಕಳಂದೂರು ಸ್ವಾಗತಿಸಿ ರೂಪಲಕ್ಷ್ಮೀ ಕಳಂದೂರು ವಂದಿಸಿದರು. ಶಂಕರ ಭಟ್ ಉಳುವಾನ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…

2 hours ago

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ

ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…

2 hours ago

ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…

2 hours ago

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

10 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

10 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

12 hours ago