Advertisement
ಸುದ್ದಿಗಳು

ಬಾಯಾರಿನಲ್ಲಿ ಜನೌಷಧ ಕೇಂದ್ರ ಉದ್ಘಾಟನೆ | ದೇಶದ ಅಭಿವೃದ್ಧಿಗೆ ಜನಸಾಮಾನ್ಯರ ಅಭಿವೃದ್ಧಿಯೂ ಅವಶ್ಯ – ಡಾ.ಪ್ರಭಾಕರ ಭಟ್‌ ಕಲ್ಲಡ್ಕ |

Share

ದೇಶದ ಅಭಿವೃದ್ಧಿಗೆ ಜನಸಾಮಾನ್ಯರು ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದುವುದು  ಅಗತ್ಯ. ಇದಕ್ಕಾಗಿ ಆರೋಗ್ಯ ಸಂಬಂಧಿಯಾಗಿ ಕಡಿಮೆ ದರದಲ್ಲಿ  ಉತ್ತಮ ಔಷಧಿ ದೊರೆಯುವ ವ್ಯವಸ್ಥೆ ಈ ದೇಶದಲ್ಲಿ ಆಗುತ್ತಿರುವುದು  ಬದಲಾವಣೆಯ ಸಂಕೇತವಾಗಿದ್ದು  ಪ್ರತೀ ವ್ಯಕ್ತಿಯ ಆರೋಗ್ಯ ಸುಧಾರಣೆಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

Advertisement
Advertisement

ಅವರು ಪೈವಳಿಕೆ ಪಂಚಾಯತ್‌ ನ ಬಾಯಾರಿನ  ಬಾಯಾರುಪದವಿನಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತೀ ವ್ಯಕ್ತಿಯು ಆರ್ಥಿಕ ಮಟ್ಟ ಎತ್ತರಿಸುತ್ತಾ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.

ಅತಿಥಿಗಳಾಗಿದ್ದ ಡಾ| ಮುರಳೀಧರ್ ಶೆಟ್ಟಿ  ಮಾತನಾಡಿ “ಈಗಿನ ಕಾಲದಲ್ಲಿ ಬದಲಾಗುತ್ತಿರುವ ಜನರ ಜೀವನ ಶೈಲಿಯಲ್ಲಿ ಔಷಧಗಳ ಅವಶ್ಯಕತೆ ಹೆಚ್ಚಾಗಿದ್ದು , ಜನೌಷಧಿಯು ಜನಸಾಮಾನ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು. ಜನೌಷಧಿಯಲ್ಲಿ ಬ್ರಾಂಡ್ ಬೇರೆಯಾಗಿದ್ದರೂ ಬೇರೆ ಕಂಪನಿಯಲ್ಲಿರುವ ಅದೇ ಅಂಶಗಳನ್ನು ಒಳಗೊಂಡಿರುತ್ತದೆ – ಪರಿಣಾಮಕಾರಿಯಾಗಿದೆ” ಎಂದು ಹೇಳಿದರು. ವಿಡಿಯೋ ವರದಿ ಇಲ್ಲಿದೆ.….

ಕಲ್ಲಡ್ಕ ಶೀರಾಮ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಕ್ರಷ್ಣಪ್ರಸಾದ ಕೆ ಎನ್ ಮತ್ತು ಪೈವಳಿಕೆ ಪಂಚಾಯತ್  ಹೆಲ್ತ್ ಮತ್ತು ಎಡ್ಯುಕೇಶನ್ ಸ್ಟ್ಯಾಂಡಿಂಗ್ ಕಮಿಟಿ  ಚೇರ್ಮೇನ್  ಜೆಡ್ ಎ ಕಯ್ಯಾರ್ ಶುಭ ಹಾರೈಸಿದರು.

ಜನೌಷಧಿ ಕೇಂದ್ರದ ಮುಖ್ಯಸ್ಥ  ವೆಂಕಟರವಿ ಕಳಂದೂರು ಸ್ವಾಗತಿಸಿ ರೂಪಲಕ್ಷ್ಮೀ ಕಳಂದೂರು ವಂದಿಸಿದರು. ಶಂಕರ ಭಟ್ ಉಳುವಾನ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

16 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago