ದೇಶದ ಅಭಿವೃದ್ಧಿಗೆ ಜನಸಾಮಾನ್ಯರು ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದುವುದು ಅಗತ್ಯ. ಇದಕ್ಕಾಗಿ ಆರೋಗ್ಯ ಸಂಬಂಧಿಯಾಗಿ ಕಡಿಮೆ ದರದಲ್ಲಿ ಉತ್ತಮ ಔಷಧಿ ದೊರೆಯುವ ವ್ಯವಸ್ಥೆ ಈ ದೇಶದಲ್ಲಿ ಆಗುತ್ತಿರುವುದು ಬದಲಾವಣೆಯ ಸಂಕೇತವಾಗಿದ್ದು ಪ್ರತೀ ವ್ಯಕ್ತಿಯ ಆರೋಗ್ಯ ಸುಧಾರಣೆಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಪೈವಳಿಕೆ ಪಂಚಾಯತ್ ನ ಬಾಯಾರಿನ ಬಾಯಾರುಪದವಿನಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತೀ ವ್ಯಕ್ತಿಯು ಆರ್ಥಿಕ ಮಟ್ಟ ಎತ್ತರಿಸುತ್ತಾ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.
ಅತಿಥಿಗಳಾಗಿದ್ದ ಡಾ| ಮುರಳೀಧರ್ ಶೆಟ್ಟಿ ಮಾತನಾಡಿ “ಈಗಿನ ಕಾಲದಲ್ಲಿ ಬದಲಾಗುತ್ತಿರುವ ಜನರ ಜೀವನ ಶೈಲಿಯಲ್ಲಿ ಔಷಧಗಳ ಅವಶ್ಯಕತೆ ಹೆಚ್ಚಾಗಿದ್ದು , ಜನೌಷಧಿಯು ಜನಸಾಮಾನ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು. ಜನೌಷಧಿಯಲ್ಲಿ ಬ್ರಾಂಡ್ ಬೇರೆಯಾಗಿದ್ದರೂ ಬೇರೆ ಕಂಪನಿಯಲ್ಲಿರುವ ಅದೇ ಅಂಶಗಳನ್ನು ಒಳಗೊಂಡಿರುತ್ತದೆ – ಪರಿಣಾಮಕಾರಿಯಾಗಿದೆ” ಎಂದು ಹೇಳಿದರು. ವಿಡಿಯೋ ವರದಿ ಇಲ್ಲಿದೆ.….
ಕಲ್ಲಡ್ಕ ಶೀರಾಮ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಕ್ರಷ್ಣಪ್ರಸಾದ ಕೆ ಎನ್ ಮತ್ತು ಪೈವಳಿಕೆ ಪಂಚಾಯತ್ ಹೆಲ್ತ್ ಮತ್ತು ಎಡ್ಯುಕೇಶನ್ ಸ್ಟ್ಯಾಂಡಿಂಗ್ ಕಮಿಟಿ ಚೇರ್ಮೇನ್ ಜೆಡ್ ಎ ಕಯ್ಯಾರ್ ಶುಭ ಹಾರೈಸಿದರು.
ಜನೌಷಧಿ ಕೇಂದ್ರದ ಮುಖ್ಯಸ್ಥ ವೆಂಕಟರವಿ ಕಳಂದೂರು ಸ್ವಾಗತಿಸಿ ರೂಪಲಕ್ಷ್ಮೀ ಕಳಂದೂರು ವಂದಿಸಿದರು. ಶಂಕರ ಭಟ್ ಉಳುವಾನ ಕಾರ್ಯಕ್ರಮ ನಿರ್ವಹಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…