Advertisement
ಸುದ್ದಿಗಳು

ಬಾಯಾರಿನಲ್ಲಿ ಜನೌಷಧ ಕೇಂದ್ರ ಉದ್ಘಾಟನೆ | ದೇಶದ ಅಭಿವೃದ್ಧಿಗೆ ಜನಸಾಮಾನ್ಯರ ಅಭಿವೃದ್ಧಿಯೂ ಅವಶ್ಯ – ಡಾ.ಪ್ರಭಾಕರ ಭಟ್‌ ಕಲ್ಲಡ್ಕ |

Share

ದೇಶದ ಅಭಿವೃದ್ಧಿಗೆ ಜನಸಾಮಾನ್ಯರು ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದುವುದು  ಅಗತ್ಯ. ಇದಕ್ಕಾಗಿ ಆರೋಗ್ಯ ಸಂಬಂಧಿಯಾಗಿ ಕಡಿಮೆ ದರದಲ್ಲಿ  ಉತ್ತಮ ಔಷಧಿ ದೊರೆಯುವ ವ್ಯವಸ್ಥೆ ಈ ದೇಶದಲ್ಲಿ ಆಗುತ್ತಿರುವುದು  ಬದಲಾವಣೆಯ ಸಂಕೇತವಾಗಿದ್ದು  ಪ್ರತೀ ವ್ಯಕ್ತಿಯ ಆರೋಗ್ಯ ಸುಧಾರಣೆಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಅವರು ಪೈವಳಿಕೆ ಪಂಚಾಯತ್‌ ನ ಬಾಯಾರಿನ  ಬಾಯಾರುಪದವಿನಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತೀ ವ್ಯಕ್ತಿಯು ಆರ್ಥಿಕ ಮಟ್ಟ ಎತ್ತರಿಸುತ್ತಾ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.

ಅತಿಥಿಗಳಾಗಿದ್ದ ಡಾ| ಮುರಳೀಧರ್ ಶೆಟ್ಟಿ  ಮಾತನಾಡಿ “ಈಗಿನ ಕಾಲದಲ್ಲಿ ಬದಲಾಗುತ್ತಿರುವ ಜನರ ಜೀವನ ಶೈಲಿಯಲ್ಲಿ ಔಷಧಗಳ ಅವಶ್ಯಕತೆ ಹೆಚ್ಚಾಗಿದ್ದು , ಜನೌಷಧಿಯು ಜನಸಾಮಾನ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು. ಜನೌಷಧಿಯಲ್ಲಿ ಬ್ರಾಂಡ್ ಬೇರೆಯಾಗಿದ್ದರೂ ಬೇರೆ ಕಂಪನಿಯಲ್ಲಿರುವ ಅದೇ ಅಂಶಗಳನ್ನು ಒಳಗೊಂಡಿರುತ್ತದೆ – ಪರಿಣಾಮಕಾರಿಯಾಗಿದೆ” ಎಂದು ಹೇಳಿದರು. ವಿಡಿಯೋ ವರದಿ ಇಲ್ಲಿದೆ.….

ಕಲ್ಲಡ್ಕ ಶೀರಾಮ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಕ್ರಷ್ಣಪ್ರಸಾದ ಕೆ ಎನ್ ಮತ್ತು ಪೈವಳಿಕೆ ಪಂಚಾಯತ್  ಹೆಲ್ತ್ ಮತ್ತು ಎಡ್ಯುಕೇಶನ್ ಸ್ಟ್ಯಾಂಡಿಂಗ್ ಕಮಿಟಿ  ಚೇರ್ಮೇನ್  ಜೆಡ್ ಎ ಕಯ್ಯಾರ್ ಶುಭ ಹಾರೈಸಿದರು.

ಜನೌಷಧಿ ಕೇಂದ್ರದ ಮುಖ್ಯಸ್ಥ  ವೆಂಕಟರವಿ ಕಳಂದೂರು ಸ್ವಾಗತಿಸಿ ರೂಪಲಕ್ಷ್ಮೀ ಕಳಂದೂರು ವಂದಿಸಿದರು. ಶಂಕರ ಭಟ್ ಉಳುವಾನ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

8 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

9 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

14 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

16 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

16 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

18 hours ago