Advertisement
ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ | 17ನೇ ಕಂತಿನ ಹಣ ರೈತರ ಖಾತೆಗೆ ಯಾವಾಗ ಬರುತ್ತೆ..?

Share

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಾಗಿಂದಲೂ ರೈತರ(Farmer) ಖಾತೆಗೆ ನೇರವಾಗಿ ಹಣ ತಲುಪುತ್ತಿದೆ. ಅನೇಕ ರೈತರಿಗೆ ತಕ್ಕಮಟ್ಟಿನ ಪ್ರಯೋಜನವಾಗಿದೆ. ಸಾಮಾನ್ಯವಾಗಿ ಯೋಜನೆಯ ಕಂತುಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಾವತಿಸಲಾಗುತ್ತದೆ. ಮುಂದಿನ ಪಿಎಂ ಕಿಸಾನ್‌ ಕಂತು ಯಾವಾಗ ಬರಲಿದೆ….

ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಕೇಂದ್ರ ಸರ್ಕಾರದ(Central govt) ಈ ಜನಪ್ರಿಯ ಯೋಜನೆಯಲ್ಲಿ(Scheam) ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ. ಮೂರು ಕಂತುಗಳಲ್ಲಿ 2000 ರೂಪಾಯಿಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಸದ್ಯ 17ನೇ ಕಂತಿನ ಯೋಜನೆಗಾಗಿ ರೈತರು ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ, ರೈತರು ಮೇ 2024 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತನ್ನು ಪಡೆಯಬಹುದು. ಆದರೆ, ಈ ಬಗ್ಗೆ ಸರಕಾರದಿಂದ ಯಾವುದೇ ಘೋಷಣೆಯಾಗಿಲ್ಲ ಮೊದಲು 16 ನೇ ಕಂತನ್ನು 28 ಫೆಬ್ರವರಿ 2024 ರಂದು ವರ್ಗಾಯಿಸಲಾಯಿತು.

ಸಾಮಾನ್ಯವಾಗಿ, ಯೋಜನೆಯ ಕಂತುಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಾವತಿಸಲಾಗುತ್ತದೆ. ಒಂದು ಏಪ್ರಿಲ್-ಜುಲೈನಲ್ಲಿ, ಎರಡನೆಯದು ಆಗಸ್ಟ್-ನವೆಂಬರ್ನಲ್ಲಿ ಮತ್ತು ಮೂರನೆಯದು ಡಿಸೆಂಬರ್-ಮಾರ್ಚ್‌ನಲ್ಲಿ. ಫೆಬ್ರವರಿಯಲ್ಲಿ 16ನೇ ಕಂತು ಪಾವತಿಯಾಗಿರುವುದರಿಂದ ಮೇ ತಿಂಗಳಿನಲ್ಲಿ ಯಾವುದೇ ದಿನ 17ನೇ ಕಂತು ಬರಬಹುದು ಎಂಬ ಲೆಕ್ಕಾಚಾರ ಹಾಕಲಾಗಿದೆ. ಆದರೆ, ಇನ್ನೂ ನಿರ್ದಿಷ್ಟ ದಿನಾಂಕವನ್ನು ಪ್ರಕಟಿಸಿಲ್ಲ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

23 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

24 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago