ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿಯವರಿಗೆ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಪ್ರದಾನ

December 5, 2024
6:55 AM

ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿ ಅವರನ್ನು ಸಂಮಾನಿಸಲಾಯಿತು.

ಈ ಸಂದರ್ಭದಲ್ಲಿ “ಜೀವನದಲ್ಲಿ ಆಸಕ್ತಿಗಳನ್ನು ಸಕ್ರಿಯಗೊಳಿಸಿದಾಗ ಅದು ಇತರರಿಗೆ ‘ಹುಚ್ಚು’ ಎಂದೆನಿಸಿಕೊಳ್ಳುತ್ತದೆ. ಇಂತಹ ಹುಚ್ಚುಗಳೇ ಬದುಕಿಗೆ ಸುಭಗತನವಾಗುತ್ತದೆ. ಓದುವ ಆಸಕ್ತಿ ಬೆಳೆಯುತ್ತದೆ” ಎಂದು ತನ್ನ ಅನುಭವವನ್ನು ಪ್ರಸ್ತುತ ಪಡಿಸಿದ ಪ್ರಕಾಶರನ್ನು ಶಾಲು, ಹಾರ, ಸ್ಮರಣಿಕೆ, ಪುಸ್ತಕಗಳು ಮತ್ತು ನಗದು ಮೊತ್ತದೊಂದಿಗೆ ಗೌರವಿಸಲಾಯಿತು.

ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ.ಪಿ.ಕುಮಾರ್ ಉಪಸ್ಥಿತರಿದ್ದು ಸಂಮಾನಿತರ ಸದ್ದಿಲ್ಲದ ಸಾಹಿತ್ಯ ಕೈಂಕರ್ಯಗಳನ್ನು ನೆನಪಿಸಿಕೊಂಡರು. ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ, ಸಾಹಿತಿಗಳ ಸಂಪರ್ಕ ಜತೆಗೆ ನಿರಂತರ ಓದು. ಪ್ರಕಾಶ್ ಕೊಡೆಂಕಿರಿಯವರ ಸದ್ದಿಲ್ಲದ ಕಾಯಕಗಳು. 2004ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿರುವುದು ಮೇಲ್ಪಂಕ್ತಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror