ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿಯವರಿಗೆ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಪ್ರದಾನ

December 5, 2024
6:55 AM

ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿ ಅವರನ್ನು ಸಂಮಾನಿಸಲಾಯಿತು.

Advertisement

ಈ ಸಂದರ್ಭದಲ್ಲಿ “ಜೀವನದಲ್ಲಿ ಆಸಕ್ತಿಗಳನ್ನು ಸಕ್ರಿಯಗೊಳಿಸಿದಾಗ ಅದು ಇತರರಿಗೆ ‘ಹುಚ್ಚು’ ಎಂದೆನಿಸಿಕೊಳ್ಳುತ್ತದೆ. ಇಂತಹ ಹುಚ್ಚುಗಳೇ ಬದುಕಿಗೆ ಸುಭಗತನವಾಗುತ್ತದೆ. ಓದುವ ಆಸಕ್ತಿ ಬೆಳೆಯುತ್ತದೆ” ಎಂದು ತನ್ನ ಅನುಭವವನ್ನು ಪ್ರಸ್ತುತ ಪಡಿಸಿದ ಪ್ರಕಾಶರನ್ನು ಶಾಲು, ಹಾರ, ಸ್ಮರಣಿಕೆ, ಪುಸ್ತಕಗಳು ಮತ್ತು ನಗದು ಮೊತ್ತದೊಂದಿಗೆ ಗೌರವಿಸಲಾಯಿತು.

ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ.ಪಿ.ಕುಮಾರ್ ಉಪಸ್ಥಿತರಿದ್ದು ಸಂಮಾನಿತರ ಸದ್ದಿಲ್ಲದ ಸಾಹಿತ್ಯ ಕೈಂಕರ್ಯಗಳನ್ನು ನೆನಪಿಸಿಕೊಂಡರು. ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ, ಸಾಹಿತಿಗಳ ಸಂಪರ್ಕ ಜತೆಗೆ ನಿರಂತರ ಓದು. ಪ್ರಕಾಶ್ ಕೊಡೆಂಕಿರಿಯವರ ಸದ್ದಿಲ್ಲದ ಕಾಯಕಗಳು. 2004ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿರುವುದು ಮೇಲ್ಪಂಕ್ತಿ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12-04-2025 | ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಸಾಧ್ಯತೆ | ಎ.13 ರಿಂದ ಮಳೆಯ ಪ್ರಮಾಣ ಕಡಿಮೆ
April 12, 2025
1:50 PM
by: ಸಾಯಿಶೇಖರ್ ಕರಿಕಳ
ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ
April 12, 2025
12:31 PM
by: ದ ರೂರಲ್ ಮಿರರ್.ಕಾಂ
ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ
ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್
April 12, 2025
11:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group