ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿ ಅವರನ್ನು ಸಂಮಾನಿಸಲಾಯಿತು.
ಈ ಸಂದರ್ಭದಲ್ಲಿ “ಜೀವನದಲ್ಲಿ ಆಸಕ್ತಿಗಳನ್ನು ಸಕ್ರಿಯಗೊಳಿಸಿದಾಗ ಅದು ಇತರರಿಗೆ ‘ಹುಚ್ಚು’ ಎಂದೆನಿಸಿಕೊಳ್ಳುತ್ತದೆ. ಇಂತಹ ಹುಚ್ಚುಗಳೇ ಬದುಕಿಗೆ ಸುಭಗತನವಾಗುತ್ತದೆ. ಓದುವ ಆಸಕ್ತಿ ಬೆಳೆಯುತ್ತದೆ” ಎಂದು ತನ್ನ ಅನುಭವವನ್ನು ಪ್ರಸ್ತುತ ಪಡಿಸಿದ ಪ್ರಕಾಶರನ್ನು ಶಾಲು, ಹಾರ, ಸ್ಮರಣಿಕೆ, ಪುಸ್ತಕಗಳು ಮತ್ತು ನಗದು ಮೊತ್ತದೊಂದಿಗೆ ಗೌರವಿಸಲಾಯಿತು.
ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ.ಪಿ.ಕುಮಾರ್ ಉಪಸ್ಥಿತರಿದ್ದು ಸಂಮಾನಿತರ ಸದ್ದಿಲ್ಲದ ಸಾಹಿತ್ಯ ಕೈಂಕರ್ಯಗಳನ್ನು ನೆನಪಿಸಿಕೊಂಡರು. ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ, ಸಾಹಿತಿಗಳ ಸಂಪರ್ಕ ಜತೆಗೆ ನಿರಂತರ ಓದು. ಪ್ರಕಾಶ್ ಕೊಡೆಂಕಿರಿಯವರ ಸದ್ದಿಲ್ಲದ ಕಾಯಕಗಳು. 2004ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿರುವುದು ಮೇಲ್ಪಂಕ್ತಿ.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…