ಸುದ್ದಿಗಳು

ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿಯವರಿಗೆ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಪ್ರದಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿ ಅವರನ್ನು ಸಂಮಾನಿಸಲಾಯಿತು.

Advertisement
Advertisement

ಈ ಸಂದರ್ಭದಲ್ಲಿ “ಜೀವನದಲ್ಲಿ ಆಸಕ್ತಿಗಳನ್ನು ಸಕ್ರಿಯಗೊಳಿಸಿದಾಗ ಅದು ಇತರರಿಗೆ ‘ಹುಚ್ಚು’ ಎಂದೆನಿಸಿಕೊಳ್ಳುತ್ತದೆ. ಇಂತಹ ಹುಚ್ಚುಗಳೇ ಬದುಕಿಗೆ ಸುಭಗತನವಾಗುತ್ತದೆ. ಓದುವ ಆಸಕ್ತಿ ಬೆಳೆಯುತ್ತದೆ” ಎಂದು ತನ್ನ ಅನುಭವವನ್ನು ಪ್ರಸ್ತುತ ಪಡಿಸಿದ ಪ್ರಕಾಶರನ್ನು ಶಾಲು, ಹಾರ, ಸ್ಮರಣಿಕೆ, ಪುಸ್ತಕಗಳು ಮತ್ತು ನಗದು ಮೊತ್ತದೊಂದಿಗೆ ಗೌರವಿಸಲಾಯಿತು.

ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ.ಪಿ.ಕುಮಾರ್ ಉಪಸ್ಥಿತರಿದ್ದು ಸಂಮಾನಿತರ ಸದ್ದಿಲ್ಲದ ಸಾಹಿತ್ಯ ಕೈಂಕರ್ಯಗಳನ್ನು ನೆನಪಿಸಿಕೊಂಡರು. ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ, ಸಾಹಿತಿಗಳ ಸಂಪರ್ಕ ಜತೆಗೆ ನಿರಂತರ ಓದು. ಪ್ರಕಾಶ್ ಕೊಡೆಂಕಿರಿಯವರ ಸದ್ದಿಲ್ಲದ ಕಾಯಕಗಳು. 2004ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿರುವುದು ಮೇಲ್ಪಂಕ್ತಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

7 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

11 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

11 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

16 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

19 hours ago