ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿ ಅವರನ್ನು ಸಂಮಾನಿಸಲಾಯಿತು.
ಈ ಸಂದರ್ಭದಲ್ಲಿ “ಜೀವನದಲ್ಲಿ ಆಸಕ್ತಿಗಳನ್ನು ಸಕ್ರಿಯಗೊಳಿಸಿದಾಗ ಅದು ಇತರರಿಗೆ ‘ಹುಚ್ಚು’ ಎಂದೆನಿಸಿಕೊಳ್ಳುತ್ತದೆ. ಇಂತಹ ಹುಚ್ಚುಗಳೇ ಬದುಕಿಗೆ ಸುಭಗತನವಾಗುತ್ತದೆ. ಓದುವ ಆಸಕ್ತಿ ಬೆಳೆಯುತ್ತದೆ” ಎಂದು ತನ್ನ ಅನುಭವವನ್ನು ಪ್ರಸ್ತುತ ಪಡಿಸಿದ ಪ್ರಕಾಶರನ್ನು ಶಾಲು, ಹಾರ, ಸ್ಮರಣಿಕೆ, ಪುಸ್ತಕಗಳು ಮತ್ತು ನಗದು ಮೊತ್ತದೊಂದಿಗೆ ಗೌರವಿಸಲಾಯಿತು.
ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ.ಪಿ.ಕುಮಾರ್ ಉಪಸ್ಥಿತರಿದ್ದು ಸಂಮಾನಿತರ ಸದ್ದಿಲ್ಲದ ಸಾಹಿತ್ಯ ಕೈಂಕರ್ಯಗಳನ್ನು ನೆನಪಿಸಿಕೊಂಡರು. ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ, ಸಾಹಿತಿಗಳ ಸಂಪರ್ಕ ಜತೆಗೆ ನಿರಂತರ ಓದು. ಪ್ರಕಾಶ್ ಕೊಡೆಂಕಿರಿಯವರ ಸದ್ದಿಲ್ಲದ ಕಾಯಕಗಳು. 2004ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿರುವುದು ಮೇಲ್ಪಂಕ್ತಿ.
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…