Advertisement
ಸುದ್ದಿಗಳು

ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿಯವರಿಗೆ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಪ್ರದಾನ

Share

ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿ ಅವರನ್ನು ಸಂಮಾನಿಸಲಾಯಿತು.

ಈ ಸಂದರ್ಭದಲ್ಲಿ “ಜೀವನದಲ್ಲಿ ಆಸಕ್ತಿಗಳನ್ನು ಸಕ್ರಿಯಗೊಳಿಸಿದಾಗ ಅದು ಇತರರಿಗೆ ‘ಹುಚ್ಚು’ ಎಂದೆನಿಸಿಕೊಳ್ಳುತ್ತದೆ. ಇಂತಹ ಹುಚ್ಚುಗಳೇ ಬದುಕಿಗೆ ಸುಭಗತನವಾಗುತ್ತದೆ. ಓದುವ ಆಸಕ್ತಿ ಬೆಳೆಯುತ್ತದೆ” ಎಂದು ತನ್ನ ಅನುಭವವನ್ನು ಪ್ರಸ್ತುತ ಪಡಿಸಿದ ಪ್ರಕಾಶರನ್ನು ಶಾಲು, ಹಾರ, ಸ್ಮರಣಿಕೆ, ಪುಸ್ತಕಗಳು ಮತ್ತು ನಗದು ಮೊತ್ತದೊಂದಿಗೆ ಗೌರವಿಸಲಾಯಿತು.

ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ.ಪಿ.ಕುಮಾರ್ ಉಪಸ್ಥಿತರಿದ್ದು ಸಂಮಾನಿತರ ಸದ್ದಿಲ್ಲದ ಸಾಹಿತ್ಯ ಕೈಂಕರ್ಯಗಳನ್ನು ನೆನಪಿಸಿಕೊಂಡರು. ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ, ಸಾಹಿತಿಗಳ ಸಂಪರ್ಕ ಜತೆಗೆ ನಿರಂತರ ಓದು. ಪ್ರಕಾಶ್ ಕೊಡೆಂಕಿರಿಯವರ ಸದ್ದಿಲ್ಲದ ಕಾಯಕಗಳು. 2004ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿರುವುದು ಮೇಲ್ಪಂಕ್ತಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

22 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago