Advertisement
ಸುದ್ದಿಗಳು

ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿಯವರಿಗೆ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಪ್ರದಾನ

Share

ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿ ಅವರನ್ನು ಸಂಮಾನಿಸಲಾಯಿತು.

ಈ ಸಂದರ್ಭದಲ್ಲಿ “ಜೀವನದಲ್ಲಿ ಆಸಕ್ತಿಗಳನ್ನು ಸಕ್ರಿಯಗೊಳಿಸಿದಾಗ ಅದು ಇತರರಿಗೆ ‘ಹುಚ್ಚು’ ಎಂದೆನಿಸಿಕೊಳ್ಳುತ್ತದೆ. ಇಂತಹ ಹುಚ್ಚುಗಳೇ ಬದುಕಿಗೆ ಸುಭಗತನವಾಗುತ್ತದೆ. ಓದುವ ಆಸಕ್ತಿ ಬೆಳೆಯುತ್ತದೆ” ಎಂದು ತನ್ನ ಅನುಭವವನ್ನು ಪ್ರಸ್ತುತ ಪಡಿಸಿದ ಪ್ರಕಾಶರನ್ನು ಶಾಲು, ಹಾರ, ಸ್ಮರಣಿಕೆ, ಪುಸ್ತಕಗಳು ಮತ್ತು ನಗದು ಮೊತ್ತದೊಂದಿಗೆ ಗೌರವಿಸಲಾಯಿತು.

ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ.ಪಿ.ಕುಮಾರ್ ಉಪಸ್ಥಿತರಿದ್ದು ಸಂಮಾನಿತರ ಸದ್ದಿಲ್ಲದ ಸಾಹಿತ್ಯ ಕೈಂಕರ್ಯಗಳನ್ನು ನೆನಪಿಸಿಕೊಂಡರು. ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ, ಸಾಹಿತಿಗಳ ಸಂಪರ್ಕ ಜತೆಗೆ ನಿರಂತರ ಓದು. ಪ್ರಕಾಶ್ ಕೊಡೆಂಕಿರಿಯವರ ಸದ್ದಿಲ್ಲದ ಕಾಯಕಗಳು. 2004ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿರುವುದು ಮೇಲ್ಪಂಕ್ತಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

4 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

5 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

5 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

15 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

15 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

16 hours ago