Advertisement
ಸುದ್ದಿಗಳು

ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿಯವರಿಗೆ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಪ್ರದಾನ

Share

ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿ ಅವರನ್ನು ಸಂಮಾನಿಸಲಾಯಿತು.

ಈ ಸಂದರ್ಭದಲ್ಲಿ “ಜೀವನದಲ್ಲಿ ಆಸಕ್ತಿಗಳನ್ನು ಸಕ್ರಿಯಗೊಳಿಸಿದಾಗ ಅದು ಇತರರಿಗೆ ‘ಹುಚ್ಚು’ ಎಂದೆನಿಸಿಕೊಳ್ಳುತ್ತದೆ. ಇಂತಹ ಹುಚ್ಚುಗಳೇ ಬದುಕಿಗೆ ಸುಭಗತನವಾಗುತ್ತದೆ. ಓದುವ ಆಸಕ್ತಿ ಬೆಳೆಯುತ್ತದೆ” ಎಂದು ತನ್ನ ಅನುಭವವನ್ನು ಪ್ರಸ್ತುತ ಪಡಿಸಿದ ಪ್ರಕಾಶರನ್ನು ಶಾಲು, ಹಾರ, ಸ್ಮರಣಿಕೆ, ಪುಸ್ತಕಗಳು ಮತ್ತು ನಗದು ಮೊತ್ತದೊಂದಿಗೆ ಗೌರವಿಸಲಾಯಿತು.

ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ.ಪಿ.ಕುಮಾರ್ ಉಪಸ್ಥಿತರಿದ್ದು ಸಂಮಾನಿತರ ಸದ್ದಿಲ್ಲದ ಸಾಹಿತ್ಯ ಕೈಂಕರ್ಯಗಳನ್ನು ನೆನಪಿಸಿಕೊಂಡರು. ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ, ಸಾಹಿತಿಗಳ ಸಂಪರ್ಕ ಜತೆಗೆ ನಿರಂತರ ಓದು. ಪ್ರಕಾಶ್ ಕೊಡೆಂಕಿರಿಯವರ ಸದ್ದಿಲ್ಲದ ಕಾಯಕಗಳು. 2004ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿರುವುದು ಮೇಲ್ಪಂಕ್ತಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

4 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

7 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

12 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

19 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago