Advertisement
ಸುದ್ದಿಗಳು

ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿಯವರಿಗೆ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಪ್ರದಾನ

Share

ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿ ಅವರನ್ನು ಸಂಮಾನಿಸಲಾಯಿತು.

ಈ ಸಂದರ್ಭದಲ್ಲಿ “ಜೀವನದಲ್ಲಿ ಆಸಕ್ತಿಗಳನ್ನು ಸಕ್ರಿಯಗೊಳಿಸಿದಾಗ ಅದು ಇತರರಿಗೆ ‘ಹುಚ್ಚು’ ಎಂದೆನಿಸಿಕೊಳ್ಳುತ್ತದೆ. ಇಂತಹ ಹುಚ್ಚುಗಳೇ ಬದುಕಿಗೆ ಸುಭಗತನವಾಗುತ್ತದೆ. ಓದುವ ಆಸಕ್ತಿ ಬೆಳೆಯುತ್ತದೆ” ಎಂದು ತನ್ನ ಅನುಭವವನ್ನು ಪ್ರಸ್ತುತ ಪಡಿಸಿದ ಪ್ರಕಾಶರನ್ನು ಶಾಲು, ಹಾರ, ಸ್ಮರಣಿಕೆ, ಪುಸ್ತಕಗಳು ಮತ್ತು ನಗದು ಮೊತ್ತದೊಂದಿಗೆ ಗೌರವಿಸಲಾಯಿತು.

ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ.ಪಿ.ಕುಮಾರ್ ಉಪಸ್ಥಿತರಿದ್ದು ಸಂಮಾನಿತರ ಸದ್ದಿಲ್ಲದ ಸಾಹಿತ್ಯ ಕೈಂಕರ್ಯಗಳನ್ನು ನೆನಪಿಸಿಕೊಂಡರು. ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ, ಸಾಹಿತಿಗಳ ಸಂಪರ್ಕ ಜತೆಗೆ ನಿರಂತರ ಓದು. ಪ್ರಕಾಶ್ ಕೊಡೆಂಕಿರಿಯವರ ಸದ್ದಿಲ್ಲದ ಕಾಯಕಗಳು. 2004ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿರುವುದು ಮೇಲ್ಪಂಕ್ತಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

9 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

12 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

13 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

13 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

13 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

21 hours ago