Advertisement
ಸುದ್ದಿಗಳು

ಎನ್ ಡಿಟಿವಿಯ ಪೋಷಕ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ಪ್ರಣಯ್ ರಾಯ್ ಹಾಗೂ ಅವರ ಪತ್ನಿ ರಾಜೀನಾಮೆ

Share

ನ್ಯೂ ಡೆಲ್ಲಿ ಟೆಲಿವಿಷನ್‌ನ (ಎನ್‌ಡಿಟಿವಿಯ) ಪೋಷಕ ಸಂಸ್ಥೆ ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಲಿಮಿಟೆಡ್‌ನ ನಿರ್ದೇಶಕ ಸ್ಥಾನಕ್ಕೆ ಸಂಸ್ಥಾಪಕರಾದ ಪ್ರಣಯ್‌ ರಾಯ್‌ ಹಾಗೂ ಅವರ ಪತ್ನಿ ರಾಧಿಕಾ ರಾಯ್‌ ರಾಜೀನಾಮೆ ನೀಡಿದ್ದಾರೆ.

Advertisement
Advertisement
Advertisement
Advertisement

ಅಲ್ಲಿಗೆ ಏಷ್ಯಾದ ನಂಬರ್‌ 1 ಶ್ರೀಮಂತ ಗೌತಮ್‌ ಅದಾನಿ ಅವರ ‘ಮಿಷನ್ ಎನ್‌ಡಿಟಿವಿ’ ಬಹುತೇಕ ಯಶಸ್ವಿಯಾಗಿದೆ.

Advertisement

ನವೆಂಬರ್‌ 29ರಿಂದಲೇ ಇವರ ರಾಜೀನಾಮೆ ಅನ್ವಯವಾಗಲಿದೆ ಎಂದು ಸೆಬಿಗೆ ಸಲ್ಲಿಸಲಾದ ದಾಖಲೆಯಲ್ಲಿ ಹೇಳಲಾಗಿದೆ.
ಸೆಬಿಗೆ ಸಲ್ಲಿಸಲಾಗಿರುವ ದಾಖಲೆಯ ಪ್ರತಿ ಕೆಲ ದಿನಗಳ ಹಿಂದಷ್ಟೇ ಆರ್‌ಆರ್‌ಪಿಆರ್‌ ಅನ್ನು ಅದಾನಿ ಖರೀದಿ ಮಾಡಿದ್ದರು. ಈ ಸಂಸ್ಥೆಯು ಎನ್‌ಡಿಟಿವಿಯಲ್ಲಿ ಶೇ 29.18 ರಷ್ಟು ಪಾಲು ಹೊಂದಿದೆ.

ಪ್ರಣಯ್‌ ರಾಯ್‌ ಅವರು ಎನ್‌ಡಿಟಿವಿಯ ಮುಖ್ಯಸ್ಥರಾಗಿದ್ದು, ರಾಧಿಕಾ ರಾಯ್‌ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಾರೆ. ಈ ಇಬ್ಬರೂ ಎನ್‌ಡಿಟಿವಿಯ ಈ ಹುದ್ದೆಗಳಲ್ಲಿ ಮುಂದುವರಿಯಲಿದ್ದಾರೆ.

Advertisement

ವೈಯಕ್ತಿಕವಾಗಿ ರಾಯ್‌ ದಂಪತಿಗಳು ಎನ್‌ಡಿಟಿವಿಯಲ್ಲಿ ಶೇ 32.26 ರಷ್ಟು ಪಾಲು ಹೊಂದಿದ್ದಾರೆ. ಇವರಿಬ್ಬರ ರಾಜೀನಾಮೆ ಬೆನ್ನಲ್ಲೇ, ಸುದೀಪ್ತಾ ಭಟ್ಟಾಚಾರ್ಯ, ಸಂಜಯ್‌ ಪುಗಾಲಿಯಾ ಹಾಗೂ ಸೆಂಥಿಲ್‌ ಸಿನ್ನಯ್ಯ ಚೆಂಗಲ್‌ವರಯನ್‌ ಅವರನ್ನು ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

7 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

13 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

1 day ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

1 day ago