Advertisement
ಸುದ್ದಿಗಳು

ಎನ್ ಡಿಟಿವಿಯ ಪೋಷಕ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ಪ್ರಣಯ್ ರಾಯ್ ಹಾಗೂ ಅವರ ಪತ್ನಿ ರಾಜೀನಾಮೆ

Share

ನ್ಯೂ ಡೆಲ್ಲಿ ಟೆಲಿವಿಷನ್‌ನ (ಎನ್‌ಡಿಟಿವಿಯ) ಪೋಷಕ ಸಂಸ್ಥೆ ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಲಿಮಿಟೆಡ್‌ನ ನಿರ್ದೇಶಕ ಸ್ಥಾನಕ್ಕೆ ಸಂಸ್ಥಾಪಕರಾದ ಪ್ರಣಯ್‌ ರಾಯ್‌ ಹಾಗೂ ಅವರ ಪತ್ನಿ ರಾಧಿಕಾ ರಾಯ್‌ ರಾಜೀನಾಮೆ ನೀಡಿದ್ದಾರೆ.

Advertisement
Advertisement

ಅಲ್ಲಿಗೆ ಏಷ್ಯಾದ ನಂಬರ್‌ 1 ಶ್ರೀಮಂತ ಗೌತಮ್‌ ಅದಾನಿ ಅವರ ‘ಮಿಷನ್ ಎನ್‌ಡಿಟಿವಿ’ ಬಹುತೇಕ ಯಶಸ್ವಿಯಾಗಿದೆ.

ನವೆಂಬರ್‌ 29ರಿಂದಲೇ ಇವರ ರಾಜೀನಾಮೆ ಅನ್ವಯವಾಗಲಿದೆ ಎಂದು ಸೆಬಿಗೆ ಸಲ್ಲಿಸಲಾದ ದಾಖಲೆಯಲ್ಲಿ ಹೇಳಲಾಗಿದೆ.
ಸೆಬಿಗೆ ಸಲ್ಲಿಸಲಾಗಿರುವ ದಾಖಲೆಯ ಪ್ರತಿ ಕೆಲ ದಿನಗಳ ಹಿಂದಷ್ಟೇ ಆರ್‌ಆರ್‌ಪಿಆರ್‌ ಅನ್ನು ಅದಾನಿ ಖರೀದಿ ಮಾಡಿದ್ದರು. ಈ ಸಂಸ್ಥೆಯು ಎನ್‌ಡಿಟಿವಿಯಲ್ಲಿ ಶೇ 29.18 ರಷ್ಟು ಪಾಲು ಹೊಂದಿದೆ.

ಪ್ರಣಯ್‌ ರಾಯ್‌ ಅವರು ಎನ್‌ಡಿಟಿವಿಯ ಮುಖ್ಯಸ್ಥರಾಗಿದ್ದು, ರಾಧಿಕಾ ರಾಯ್‌ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಾರೆ. ಈ ಇಬ್ಬರೂ ಎನ್‌ಡಿಟಿವಿಯ ಈ ಹುದ್ದೆಗಳಲ್ಲಿ ಮುಂದುವರಿಯಲಿದ್ದಾರೆ.

ವೈಯಕ್ತಿಕವಾಗಿ ರಾಯ್‌ ದಂಪತಿಗಳು ಎನ್‌ಡಿಟಿವಿಯಲ್ಲಿ ಶೇ 32.26 ರಷ್ಟು ಪಾಲು ಹೊಂದಿದ್ದಾರೆ. ಇವರಿಬ್ಬರ ರಾಜೀನಾಮೆ ಬೆನ್ನಲ್ಲೇ, ಸುದೀಪ್ತಾ ಭಟ್ಟಾಚಾರ್ಯ, ಸಂಜಯ್‌ ಪುಗಾಲಿಯಾ ಹಾಗೂ ಸೆಂಥಿಲ್‌ ಸಿನ್ನಯ್ಯ ಚೆಂಗಲ್‌ವರಯನ್‌ ಅವರನ್ನು ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

47 seconds ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

5 minutes ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

12 minutes ago

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

22 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

22 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago