ಸುದ್ದಿಗಳು

ಎನ್ ಡಿಟಿವಿಯ ಪೋಷಕ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ಪ್ರಣಯ್ ರಾಯ್ ಹಾಗೂ ಅವರ ಪತ್ನಿ ರಾಜೀನಾಮೆ

Share

ನ್ಯೂ ಡೆಲ್ಲಿ ಟೆಲಿವಿಷನ್‌ನ (ಎನ್‌ಡಿಟಿವಿಯ) ಪೋಷಕ ಸಂಸ್ಥೆ ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಲಿಮಿಟೆಡ್‌ನ ನಿರ್ದೇಶಕ ಸ್ಥಾನಕ್ಕೆ ಸಂಸ್ಥಾಪಕರಾದ ಪ್ರಣಯ್‌ ರಾಯ್‌ ಹಾಗೂ ಅವರ ಪತ್ನಿ ರಾಧಿಕಾ ರಾಯ್‌ ರಾಜೀನಾಮೆ ನೀಡಿದ್ದಾರೆ.

ಅಲ್ಲಿಗೆ ಏಷ್ಯಾದ ನಂಬರ್‌ 1 ಶ್ರೀಮಂತ ಗೌತಮ್‌ ಅದಾನಿ ಅವರ ‘ಮಿಷನ್ ಎನ್‌ಡಿಟಿವಿ’ ಬಹುತೇಕ ಯಶಸ್ವಿಯಾಗಿದೆ.

ನವೆಂಬರ್‌ 29ರಿಂದಲೇ ಇವರ ರಾಜೀನಾಮೆ ಅನ್ವಯವಾಗಲಿದೆ ಎಂದು ಸೆಬಿಗೆ ಸಲ್ಲಿಸಲಾದ ದಾಖಲೆಯಲ್ಲಿ ಹೇಳಲಾಗಿದೆ.
ಸೆಬಿಗೆ ಸಲ್ಲಿಸಲಾಗಿರುವ ದಾಖಲೆಯ ಪ್ರತಿ ಕೆಲ ದಿನಗಳ ಹಿಂದಷ್ಟೇ ಆರ್‌ಆರ್‌ಪಿಆರ್‌ ಅನ್ನು ಅದಾನಿ ಖರೀದಿ ಮಾಡಿದ್ದರು. ಈ ಸಂಸ್ಥೆಯು ಎನ್‌ಡಿಟಿವಿಯಲ್ಲಿ ಶೇ 29.18 ರಷ್ಟು ಪಾಲು ಹೊಂದಿದೆ.

ಪ್ರಣಯ್‌ ರಾಯ್‌ ಅವರು ಎನ್‌ಡಿಟಿವಿಯ ಮುಖ್ಯಸ್ಥರಾಗಿದ್ದು, ರಾಧಿಕಾ ರಾಯ್‌ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಾರೆ. ಈ ಇಬ್ಬರೂ ಎನ್‌ಡಿಟಿವಿಯ ಈ ಹುದ್ದೆಗಳಲ್ಲಿ ಮುಂದುವರಿಯಲಿದ್ದಾರೆ.

ವೈಯಕ್ತಿಕವಾಗಿ ರಾಯ್‌ ದಂಪತಿಗಳು ಎನ್‌ಡಿಟಿವಿಯಲ್ಲಿ ಶೇ 32.26 ರಷ್ಟು ಪಾಲು ಹೊಂದಿದ್ದಾರೆ. ಇವರಿಬ್ಬರ ರಾಜೀನಾಮೆ ಬೆನ್ನಲ್ಲೇ, ಸುದೀಪ್ತಾ ಭಟ್ಟಾಚಾರ್ಯ, ಸಂಜಯ್‌ ಪುಗಾಲಿಯಾ ಹಾಗೂ ಸೆಂಥಿಲ್‌ ಸಿನ್ನಯ್ಯ ಚೆಂಗಲ್‌ವರಯನ್‌ ಅವರನ್ನು ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

20 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

1 day ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

1 day ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

1 day ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago