ಜನತಾ ಬಜಾರ್‌ ಅಧ್ಯಕ್ಷರಾಗಿ ಪ್ರಸನ್ನ ಕೆ ಎಣ್ಮೂರು ಆಯ್ಕೆ

October 24, 2025
9:09 PM

ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ  ನಿಯಮಿತ – ಜನತಾ ಬಜಾರ್‌ ಇದರ ನೂತನ ಅಧ್ಯಕ್ಷರಾಗಿ ಕಡಬ ತಾಲೂಕಿನ ಎಣ್ಮೂರಿನ ಪ್ರಸನ್ನ ಕೆ. ಹಾಗೂ ಉಪಾಧ್ಯಕ್ಷರಾಗಿ ಮದಲಾಕ್ಷಿ ರೈ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜನತಾ ಬಜಾರ್‌ ಅಧ್ಯಕ್ಷ –ಉಪಾಧ್ಯಕ್ಷ ಹುದ್ದೆಗೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳಾದ ಪ್ರಸನ್ನ ಕೆ ಎಣ್ಮೂರು ಮತ್ತು ಮದಲಾಕ್ಷಿ ರೈ ಅಧ್ಯಕ್ಷ –ಉಪಾಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು ಬೇರಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿ ವಿಲಾಸ್‌ ಈ ಇಬ್ಬರ ಆಯ್ಕೆಯನ್ನು ಘೋಷಿಸಿದರು.

ನಿರ್ದೇಶಕರಾಗಿ ದಿನೇಶ್‌ ಹೆಗ್ಡೆ, ಪುರುಷೋತ್ತಮ ಭಟ್‌, ಮೋಹನ್‌ ಕುಂಬ್ಳೇಕರ್‌, ಶಾಂತಾ ಆರ್‌, ಉದಯ ಮಾದೋಡಿ, ಭಾಗೀರಥಿ ಮುರುಳ್ಯ, ಪಕೀರಪ್ಪ, ಸುಜಯ ಹೇಮಚಂದ್ರ, ಬಿ.ಜನಾರ್ದನ, ನವೀನ್‌ ಬಾಳುಗೋಡು, ಶಶಿಧರ ಶೆಟ್ಟಿ ಮತ್ತು ದಯಾನಂದ ಅಡ್ಯಾರ್‌ ಆಯ್ಕೆಯಾಗಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?
August 8, 2026
11:50 AM
by: ಸಾಯಿಶೇಖರ್ ಕರಿಕಳ
ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror