ಪ್ರವೀಣ ನೆಟ್ಟಾರು ಅವರ ಕನಸಿನ ಮನೆ ನಿರ್ಮಾಣಕ್ಕೆ ಚಾಲನೆ | ಬಿಜೆಪಿ ವತಿಯಿಂದ ಭೂಮಿಪೂಜೆ |

November 2, 2022
6:09 PM

ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು​ ಅವರ ಕನಸಿನ  ಮನೆ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ಹಲವರು ಭಾಗವಹಿಸಿದ್ದರು.

ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಹೊಸ ಮನೆಯನ್ನು ಕಟ್ಟಿಸಿಕೊಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್​  ಕಟೀಲು ಭರವಸೆ ನೀಡಿದ್ದರು.  ಹೀಗಾಗಿ ಪ್ರವೀಣ್ ಅವರ  ನೆಟ್ಟಾರುವಿನಲ್ಲಿ ಈಗಿರುವ ಮನೆಯ ಸಮೀಪದಲ್ಲೇ ಹೊಸ ಮನೆಯನ್ನು ನಿರ್ಮಿಸುವುದು ಪ್ರವೀಣ್‌ ಅವರ ಕನಸಾಗಿತ್ತು. ಅದೇ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಭೂಮಿಪೂಜೆ ನಡೆಸಲಾಯಿತು.

ಭೂಮಿ ಪೂಜೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ , 60 ಲಕ್ಷ ರೂಪಾಯಿ ವೆಚ್ಚದಲ್ಲಿ 2,700 ಚದರ್​ ಅಡಿ ಮನೆಯು ಮೇ ತಿಂಗಳ ಅಂತ್ಯದೊಳಗೆ ನಿರ್ಮಾಣವಾಗಲಿದೆ ಎಂದರು.

ಈ ಸಂದರ್ಭ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು, ಮುರಳಿಕೃಷ್ಣ ಹಸಂತಡ್ಕ ಸೇರಿದಂತೆ ಹಲವು ಮಂದಿ ಭಾಗಿಯಾದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror