ಪ್ರವೀಣ ನೆಟ್ಟಾರು ಅವರ ಕನಸಿನ ಮನೆ ನಿರ್ಮಾಣಕ್ಕೆ ಚಾಲನೆ | ಬಿಜೆಪಿ ವತಿಯಿಂದ ಭೂಮಿಪೂಜೆ |

November 2, 2022
6:09 PM

ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು​ ಅವರ ಕನಸಿನ  ಮನೆ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ಹಲವರು ಭಾಗವಹಿಸಿದ್ದರು.

ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಹೊಸ ಮನೆಯನ್ನು ಕಟ್ಟಿಸಿಕೊಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್​  ಕಟೀಲು ಭರವಸೆ ನೀಡಿದ್ದರು.  ಹೀಗಾಗಿ ಪ್ರವೀಣ್ ಅವರ  ನೆಟ್ಟಾರುವಿನಲ್ಲಿ ಈಗಿರುವ ಮನೆಯ ಸಮೀಪದಲ್ಲೇ ಹೊಸ ಮನೆಯನ್ನು ನಿರ್ಮಿಸುವುದು ಪ್ರವೀಣ್‌ ಅವರ ಕನಸಾಗಿತ್ತು. ಅದೇ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಭೂಮಿಪೂಜೆ ನಡೆಸಲಾಯಿತು.

ಭೂಮಿ ಪೂಜೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ , 60 ಲಕ್ಷ ರೂಪಾಯಿ ವೆಚ್ಚದಲ್ಲಿ 2,700 ಚದರ್​ ಅಡಿ ಮನೆಯು ಮೇ ತಿಂಗಳ ಅಂತ್ಯದೊಳಗೆ ನಿರ್ಮಾಣವಾಗಲಿದೆ ಎಂದರು.

ಈ ಸಂದರ್ಭ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು, ಮುರಳಿಕೃಷ್ಣ ಹಸಂತಡ್ಕ ಸೇರಿದಂತೆ ಹಲವು ಮಂದಿ ಭಾಗಿಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror