ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿ | ಶಿಹಾಬ್ ಈ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ |

August 11, 2022
2:16 PM

ಬಿಜೆಪಿ ಯುವಮೋರ್ಚಾ ಮುಖಂಡ , ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಡೀ ಪ್ರಕರಣದ ಮಾಸ್ಟರ್‌ ಮೈಂಡ್‌ ಶಿಹಾಬ್  ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಬೇಧಿಸಿದ ಜಿಲ್ಲಾ ಪೊಲೀಸರು  ಇಡೀ ಪ್ರಕರಣದ ಪ್ರಮುಖ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ  ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳು ಶಿಹಾಬುದ್ದೀನ್ ಸುಳ್ಯ(33), ಬಶೀರ್ ಎಲಿಮಲೆ (29) ರಿಯಾಸ್ ಅಂಕತ್ತಡ್ಕ (27).  ಸುಳ್ಯದ ಶಿಹಾಬುದ್ದೀನ್‌ ಈ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್  ಆಗಿದ್ದಾನೆ ಎಂದು ಎಜಿಡಿಪಿ ಮಾಹಿತಿ ನೀಡಿದರು.

ಆರೋಪಿಗಳ ಬಗ್ಗೆ ಮಾಹಿತಿ ಇದ್ದರೂ ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿದ್ದ ಕಾರಣ ಪ್ರಮುಖ ಆರೋಪಿಗಳ ಬಂಧನಕ್ಕೆ ತಡವಾಗಿದೆ.ಹತ್ಯೆ ಮಾಡಿದ ಬಳಿಕ ಆರೋಪಿಗಳು ಕಾಸರಗೋಡಿನ ಮಸೀದಿಯೊಂದರಲ್ಲಿ ಆಶ್ರಯ ಪಡೆದಿದ್ದಾರೆ ಎನ್ನುವುದು ಮಾಹಿತಿ ಲಭ್ಯವಾಗಿದೆ. ಅದಾದ ನಂತರ ಸ್ಥಳ ಬದಲಾವಣೆಗಾಗಿ ಎಲ್ಲೆಲ್ಲಾ ಹೋಗಿದ್ದಾರೆ ಎಂಬ ಮಾಹಿತಿ ಪಡೆಯಲಾಗುತ್ತಿದ್ದು ತನಿಖೆಯ ಬಳಿಕ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು. ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎನ್ನುವುದು  ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಈ ಆರೋಪಿಗಳ ಮೇಲೆ ಬೇರೆ ಯಾವುದೇ ಕೇಸುಗಳು ಇಲ್ಲ. ಆರೋಪಿಗಳಿಗೆ ಯಾವೆಲ್ಲಾ ಸಂಘಟನೆಗಳ ಜೊತೆ ಲಿಂಕ್‌ ಇದೆ ಎನ್ನುವುದನ್ನು  ಪತ್ತೆ ಮಾಡಲಾಗುತ್ತಿದೆ, ತನಿಖೆಯ ಸಂಪೂರ್ಣ ವರದಿಯನ್ನು ಎನ್ ಐ  ಎ ಗೆ ನೀಡಲಿದ್ದೇವೆ ಮುಂದಕ್ಕೆ ಅವರು ತನಿಖೆ ಮುಂದುವರಿಸಲಿದ್ದಾರೆ ಎಂದು ಅಲೋಕ್‌ ಕುಮಾರ್‌ ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror