ಬಿಜೆಪಿ ಯುವಮೋರ್ಚಾ ಮುಖಂಡ , ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಶಿಹಾಬ್ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಬೇಧಿಸಿದ ಜಿಲ್ಲಾ ಪೊಲೀಸರು ಇಡೀ ಪ್ರಕರಣದ ಪ್ರಮುಖ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳು ಶಿಹಾಬುದ್ದೀನ್ ಸುಳ್ಯ(33), ಬಶೀರ್ ಎಲಿಮಲೆ (29) ರಿಯಾಸ್ ಅಂಕತ್ತಡ್ಕ (27). ಸುಳ್ಯದ ಶಿಹಾಬುದ್ದೀನ್ ಈ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದಾನೆ ಎಂದು ಎಜಿಡಿಪಿ ಮಾಹಿತಿ ನೀಡಿದರು.
ಆರೋಪಿಗಳ ಬಗ್ಗೆ ಮಾಹಿತಿ ಇದ್ದರೂ ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿದ್ದ ಕಾರಣ ಪ್ರಮುಖ ಆರೋಪಿಗಳ ಬಂಧನಕ್ಕೆ ತಡವಾಗಿದೆ.ಹತ್ಯೆ ಮಾಡಿದ ಬಳಿಕ ಆರೋಪಿಗಳು ಕಾಸರಗೋಡಿನ ಮಸೀದಿಯೊಂದರಲ್ಲಿ ಆಶ್ರಯ ಪಡೆದಿದ್ದಾರೆ ಎನ್ನುವುದು ಮಾಹಿತಿ ಲಭ್ಯವಾಗಿದೆ. ಅದಾದ ನಂತರ ಸ್ಥಳ ಬದಲಾವಣೆಗಾಗಿ ಎಲ್ಲೆಲ್ಲಾ ಹೋಗಿದ್ದಾರೆ ಎಂಬ ಮಾಹಿತಿ ಪಡೆಯಲಾಗುತ್ತಿದ್ದು ತನಿಖೆಯ ಬಳಿಕ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು. ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎನ್ನುವುದು ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಈ ಆರೋಪಿಗಳ ಮೇಲೆ ಬೇರೆ ಯಾವುದೇ ಕೇಸುಗಳು ಇಲ್ಲ. ಆರೋಪಿಗಳಿಗೆ ಯಾವೆಲ್ಲಾ ಸಂಘಟನೆಗಳ ಜೊತೆ ಲಿಂಕ್ ಇದೆ ಎನ್ನುವುದನ್ನು ಪತ್ತೆ ಮಾಡಲಾಗುತ್ತಿದೆ, ತನಿಖೆಯ ಸಂಪೂರ್ಣ ವರದಿಯನ್ನು ಎನ್ ಐ ಎ ಗೆ ನೀಡಲಿದ್ದೇವೆ ಮುಂದಕ್ಕೆ ಅವರು ತನಿಖೆ ಮುಂದುವರಿಸಲಿದ್ದಾರೆ ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದರು.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…