ಬಿಜೆಪಿ ಯುವಮೋರ್ಚಾ ಮುಖಂಡ , ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಶಿಹಾಬ್ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಬೇಧಿಸಿದ ಜಿಲ್ಲಾ ಪೊಲೀಸರು ಇಡೀ ಪ್ರಕರಣದ ಪ್ರಮುಖ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳು ಶಿಹಾಬುದ್ದೀನ್ ಸುಳ್ಯ(33), ಬಶೀರ್ ಎಲಿಮಲೆ (29) ರಿಯಾಸ್ ಅಂಕತ್ತಡ್ಕ (27). ಸುಳ್ಯದ ಶಿಹಾಬುದ್ದೀನ್ ಈ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದಾನೆ ಎಂದು ಎಜಿಡಿಪಿ ಮಾಹಿತಿ ನೀಡಿದರು.
ಆರೋಪಿಗಳ ಬಗ್ಗೆ ಮಾಹಿತಿ ಇದ್ದರೂ ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿದ್ದ ಕಾರಣ ಪ್ರಮುಖ ಆರೋಪಿಗಳ ಬಂಧನಕ್ಕೆ ತಡವಾಗಿದೆ.ಹತ್ಯೆ ಮಾಡಿದ ಬಳಿಕ ಆರೋಪಿಗಳು ಕಾಸರಗೋಡಿನ ಮಸೀದಿಯೊಂದರಲ್ಲಿ ಆಶ್ರಯ ಪಡೆದಿದ್ದಾರೆ ಎನ್ನುವುದು ಮಾಹಿತಿ ಲಭ್ಯವಾಗಿದೆ. ಅದಾದ ನಂತರ ಸ್ಥಳ ಬದಲಾವಣೆಗಾಗಿ ಎಲ್ಲೆಲ್ಲಾ ಹೋಗಿದ್ದಾರೆ ಎಂಬ ಮಾಹಿತಿ ಪಡೆಯಲಾಗುತ್ತಿದ್ದು ತನಿಖೆಯ ಬಳಿಕ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು. ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎನ್ನುವುದು ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಈ ಆರೋಪಿಗಳ ಮೇಲೆ ಬೇರೆ ಯಾವುದೇ ಕೇಸುಗಳು ಇಲ್ಲ. ಆರೋಪಿಗಳಿಗೆ ಯಾವೆಲ್ಲಾ ಸಂಘಟನೆಗಳ ಜೊತೆ ಲಿಂಕ್ ಇದೆ ಎನ್ನುವುದನ್ನು ಪತ್ತೆ ಮಾಡಲಾಗುತ್ತಿದೆ, ತನಿಖೆಯ ಸಂಪೂರ್ಣ ವರದಿಯನ್ನು ಎನ್ ಐ ಎ ಗೆ ನೀಡಲಿದ್ದೇವೆ ಮುಂದಕ್ಕೆ ಅವರು ತನಿಖೆ ಮುಂದುವರಿಸಲಿದ್ದಾರೆ ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…