ಪ್ರವೀಣ್ ನೆಟ್ಟಾರು
ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಘಟನೆಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ.
ಯುವ ನಾಯಕನನ್ನು ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಹೇಯ ಕೃತ್ಯ ಎಲ್ಲರೂ ತಲೆ ತಗ್ಗಿಸುವ ವಿಚಾರ. ಸರ್ಕಾರ ತಕ್ಷಣ ಆರೋಪಿಗಳನ್ನು ಬಂಧಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. ಪ್ರವೀಣ್ ಸದಾ ಶ್ರೀಮಠದ ಜತೆ ಉತ್ತಮ ಸಂಪರ್ಕ ಹೊಂದಿದ್ದು, ಆಗಾಗ್ಗೆ ಶ್ರೀಮಠಕ್ಕೆ ಭೇಟಿ ನೀಡಿ ಸಾಮಾಜಿಕ ವಿಷಯಗಳ ಬಗ್ಗೆ ಮಾರ್ಗದರ್ಶನ ಪಡೆಯುತ್ತಿದ್ದ. ಆತನ ಕುಟುಂಬದ ಜತೆ ಶ್ರೀಮಠ ಸದಾ ಇರುತ್ತದೆ ಎಂದು ಅಭಯ ನೀಡಿದ್ದಾರೆ.
ಪ್ರವೀಣ್ ಸಾವು ಸಮಾಜಕ್ಕೆ ತುಂಬಲಾರದ ನಷ್ಟ. ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಜನ ಶಾಂತಿಪ್ರಿಯರು. ಜನ ಆವೇಶಕ್ಕೆ ಒಳಗಾಗದೇ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ನ್ಯಾಯಕ್ಕಾಗಿ ನಡೆಸುವ ಹೋರಾಟ ಶಾಂತಿಯುತವಾಗಿರಲಿ ಎಂದು ಸ್ವಾಮೀಜಿ ಕಿವಿಮಾತು ಹೇಳಿದ್ದಾರೆ.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…