ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಮಧ್ಯಾಹ್ನ ಸುದ್ದಿಗೋಷ್ಟಿಯಲ್ಲಿ ಸಮಗ್ರ ಮಾಹಿತಿ | ಆರೋಪಿಗಳ ಬಂಧನ – ತನಿಖೆಯ ಹಾದಿಯ ಬಗ್ಗೆ ವಿವರ ಸಾಧ್ಯತೆ | ಪ್ರಕರಣದ ಬಗ್ಗೆ ಏನೇನು ತಪ್ಪು ಮಾಹಿತಿ ಇತ್ತು?

August 11, 2022
11:25 AM

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ಮಾಹಿತಿ ಹಾಗೂ ಆರೋಪಿಗಳ ಬಂಧನ, ತನಿಖೆಯ ಹಾದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳೂ ಸುಳ್ಯ ಆಸುಪಾಸಿನವರೇ ಆಗಿದ್ದಾರೆ. ತನಿಖೆಯ ಹಾದಿ ತಪ್ಪಿಸಲು ಕೇರಳ ವಾಹನ ಬಳಕೆ, ಗಡಿಭಾಗದವರೆಗೆ ಹಂತಕರ ಬಿಟ್ಟಿರುವ ಬಗ್ಗೆ ಸುಳ್ಳು ಮಾಹಿತಿ, ಮಾಹಿತಿಯೇ ತಿಳಿದಿಲ್ಲ ಎಂಬ ತಪ್ಪು ಮಾಹಿತಿ ಇತ್ಯಾದಿಗಳ ಮೂಲಕ ಇಡೀ ಪ್ರಕರಣ ದಿಕ್ಕು ತಪ್ಪಿಸುವಂತೆ ಪ್ರಯತ್ನ ಮಾಡಲಾಗಿತ್ತು. ಆದರೆ ಪೊಲೀಸರು ತಮ್ಮ ಜಾಲದ ಮೂಲಕ ಎಲ್ಲಾ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.  ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆಯೂ ಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು. ಎನ್‌ ಐ ಎ ಕೂಡಾ ತನಿಖೆ ನಡೆಸುತ್ತಿದೆ. ಇಂದು ಎಸ್.ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಪ್ರಕರಣದ ಸಮಗ್ರವಾದ ಅಧಿಕೃತ ಮಾಹಿತಿ ಹೊರಬೀಳಲಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
January 12, 2026
7:50 PM
by: ರೂರಲ್‌ ಮಿರರ್ ಸುದ್ದಿಜಾಲ
ನಿಮಗೆ ವಿಕ್ನೇಸ್ ಆಗುತ್ತಿದೆಯೇ…? ಹಾಗಾದರೆ ನಿಮ್ಮ ದೇಹದಲ್ಲಿ ಕೊರತೆ ಯಾವುದು…?
January 12, 2026
7:39 PM
by: ರೂರಲ್‌ ಮಿರರ್ ಸುದ್ದಿಜಾಲ
ನಿಮ್ಮ ಬಳಿ 15 ವರ್ಷ ಹಳೆಯ ವಾಹನಗಳಿವೆಯೇ…? ಹಾಗಾದರೆ ಈ ಹೊಸ ರೂಲ್ಸ್ ಬಗ್ಗೆ ತಿಳಿಯಲೇಬೇಕು..!
January 12, 2026
7:37 PM
by: ರೂರಲ್‌ ಮಿರರ್ ಸುದ್ದಿಜಾಲ
ನಗರದ ಉದ್ಯೋಗ ತ್ಯಜಿಸಿ ಹಳ್ಳಿಯಲ್ಲಿ ಉದ್ಯಮ | ಎತ್ತಿನ ಗಾಣದ ಎಣ್ಣೆಯಿಂದ ಯಶಸ್ಸು
January 12, 2026
7:36 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror