ಪ್ರವೀಣ್ ನೆಟ್ಟಾರು
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ಮಾಹಿತಿ ಹಾಗೂ ಆರೋಪಿಗಳ ಬಂಧನ, ತನಿಖೆಯ ಹಾದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳೂ ಸುಳ್ಯ ಆಸುಪಾಸಿನವರೇ ಆಗಿದ್ದಾರೆ. ತನಿಖೆಯ ಹಾದಿ ತಪ್ಪಿಸಲು ಕೇರಳ ವಾಹನ ಬಳಕೆ, ಗಡಿಭಾಗದವರೆಗೆ ಹಂತಕರ ಬಿಟ್ಟಿರುವ ಬಗ್ಗೆ ಸುಳ್ಳು ಮಾಹಿತಿ, ಮಾಹಿತಿಯೇ ತಿಳಿದಿಲ್ಲ ಎಂಬ ತಪ್ಪು ಮಾಹಿತಿ ಇತ್ಯಾದಿಗಳ ಮೂಲಕ ಇಡೀ ಪ್ರಕರಣ ದಿಕ್ಕು ತಪ್ಪಿಸುವಂತೆ ಪ್ರಯತ್ನ ಮಾಡಲಾಗಿತ್ತು. ಆದರೆ ಪೊಲೀಸರು ತಮ್ಮ ಜಾಲದ ಮೂಲಕ ಎಲ್ಲಾ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆಯೂ ಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು. ಎನ್ ಐ ಎ ಕೂಡಾ ತನಿಖೆ ನಡೆಸುತ್ತಿದೆ. ಇಂದು ಎಸ್.ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಪ್ರಕರಣದ ಸಮಗ್ರವಾದ ಅಧಿಕೃತ ಮಾಹಿತಿ ಹೊರಬೀಳಲಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…