ಪ್ರವೀಣ್ ನೆಟ್ಟಾರು
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ಮಾಹಿತಿ ಹಾಗೂ ಆರೋಪಿಗಳ ಬಂಧನ, ತನಿಖೆಯ ಹಾದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳೂ ಸುಳ್ಯ ಆಸುಪಾಸಿನವರೇ ಆಗಿದ್ದಾರೆ. ತನಿಖೆಯ ಹಾದಿ ತಪ್ಪಿಸಲು ಕೇರಳ ವಾಹನ ಬಳಕೆ, ಗಡಿಭಾಗದವರೆಗೆ ಹಂತಕರ ಬಿಟ್ಟಿರುವ ಬಗ್ಗೆ ಸುಳ್ಳು ಮಾಹಿತಿ, ಮಾಹಿತಿಯೇ ತಿಳಿದಿಲ್ಲ ಎಂಬ ತಪ್ಪು ಮಾಹಿತಿ ಇತ್ಯಾದಿಗಳ ಮೂಲಕ ಇಡೀ ಪ್ರಕರಣ ದಿಕ್ಕು ತಪ್ಪಿಸುವಂತೆ ಪ್ರಯತ್ನ ಮಾಡಲಾಗಿತ್ತು. ಆದರೆ ಪೊಲೀಸರು ತಮ್ಮ ಜಾಲದ ಮೂಲಕ ಎಲ್ಲಾ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆಯೂ ಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು. ಎನ್ ಐ ಎ ಕೂಡಾ ತನಿಖೆ ನಡೆಸುತ್ತಿದೆ. ಇಂದು ಎಸ್.ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಪ್ರಕರಣದ ಸಮಗ್ರವಾದ ಅಧಿಕೃತ ಮಾಹಿತಿ ಹೊರಬೀಳಲಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…