ಪ್ರವೀಣ್ ನೆಟ್ಟಾರು
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ಮಾಹಿತಿ ಹಾಗೂ ಆರೋಪಿಗಳ ಬಂಧನ, ತನಿಖೆಯ ಹಾದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳೂ ಸುಳ್ಯ ಆಸುಪಾಸಿನವರೇ ಆಗಿದ್ದಾರೆ. ತನಿಖೆಯ ಹಾದಿ ತಪ್ಪಿಸಲು ಕೇರಳ ವಾಹನ ಬಳಕೆ, ಗಡಿಭಾಗದವರೆಗೆ ಹಂತಕರ ಬಿಟ್ಟಿರುವ ಬಗ್ಗೆ ಸುಳ್ಳು ಮಾಹಿತಿ, ಮಾಹಿತಿಯೇ ತಿಳಿದಿಲ್ಲ ಎಂಬ ತಪ್ಪು ಮಾಹಿತಿ ಇತ್ಯಾದಿಗಳ ಮೂಲಕ ಇಡೀ ಪ್ರಕರಣ ದಿಕ್ಕು ತಪ್ಪಿಸುವಂತೆ ಪ್ರಯತ್ನ ಮಾಡಲಾಗಿತ್ತು. ಆದರೆ ಪೊಲೀಸರು ತಮ್ಮ ಜಾಲದ ಮೂಲಕ ಎಲ್ಲಾ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆಯೂ ಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು. ಎನ್ ಐ ಎ ಕೂಡಾ ತನಿಖೆ ನಡೆಸುತ್ತಿದೆ. ಇಂದು ಎಸ್.ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಪ್ರಕರಣದ ಸಮಗ್ರವಾದ ಅಧಿಕೃತ ಮಾಹಿತಿ ಹೊರಬೀಳಲಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…