ಪ್ರವೀಣ್ ನೆಟ್ಟಾರು
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ಮಾಹಿತಿ ಹಾಗೂ ಆರೋಪಿಗಳ ಬಂಧನ, ತನಿಖೆಯ ಹಾದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳೂ ಸುಳ್ಯ ಆಸುಪಾಸಿನವರೇ ಆಗಿದ್ದಾರೆ. ತನಿಖೆಯ ಹಾದಿ ತಪ್ಪಿಸಲು ಕೇರಳ ವಾಹನ ಬಳಕೆ, ಗಡಿಭಾಗದವರೆಗೆ ಹಂತಕರ ಬಿಟ್ಟಿರುವ ಬಗ್ಗೆ ಸುಳ್ಳು ಮಾಹಿತಿ, ಮಾಹಿತಿಯೇ ತಿಳಿದಿಲ್ಲ ಎಂಬ ತಪ್ಪು ಮಾಹಿತಿ ಇತ್ಯಾದಿಗಳ ಮೂಲಕ ಇಡೀ ಪ್ರಕರಣ ದಿಕ್ಕು ತಪ್ಪಿಸುವಂತೆ ಪ್ರಯತ್ನ ಮಾಡಲಾಗಿತ್ತು. ಆದರೆ ಪೊಲೀಸರು ತಮ್ಮ ಜಾಲದ ಮೂಲಕ ಎಲ್ಲಾ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆಯೂ ಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು. ಎನ್ ಐ ಎ ಕೂಡಾ ತನಿಖೆ ನಡೆಸುತ್ತಿದೆ. ಇಂದು ಎಸ್.ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಪ್ರಕರಣದ ಸಮಗ್ರವಾದ ಅಧಿಕೃತ ಮಾಹಿತಿ ಹೊರಬೀಳಲಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…