ಪ್ರವೀಣ್ ನೆಟ್ಟಾರು
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ಮಾಹಿತಿ ಹಾಗೂ ಆರೋಪಿಗಳ ಬಂಧನ, ತನಿಖೆಯ ಹಾದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳೂ ಸುಳ್ಯ ಆಸುಪಾಸಿನವರೇ ಆಗಿದ್ದಾರೆ. ತನಿಖೆಯ ಹಾದಿ ತಪ್ಪಿಸಲು ಕೇರಳ ವಾಹನ ಬಳಕೆ, ಗಡಿಭಾಗದವರೆಗೆ ಹಂತಕರ ಬಿಟ್ಟಿರುವ ಬಗ್ಗೆ ಸುಳ್ಳು ಮಾಹಿತಿ, ಮಾಹಿತಿಯೇ ತಿಳಿದಿಲ್ಲ ಎಂಬ ತಪ್ಪು ಮಾಹಿತಿ ಇತ್ಯಾದಿಗಳ ಮೂಲಕ ಇಡೀ ಪ್ರಕರಣ ದಿಕ್ಕು ತಪ್ಪಿಸುವಂತೆ ಪ್ರಯತ್ನ ಮಾಡಲಾಗಿತ್ತು. ಆದರೆ ಪೊಲೀಸರು ತಮ್ಮ ಜಾಲದ ಮೂಲಕ ಎಲ್ಲಾ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆಯೂ ಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು. ಎನ್ ಐ ಎ ಕೂಡಾ ತನಿಖೆ ನಡೆಸುತ್ತಿದೆ. ಇಂದು ಎಸ್.ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಪ್ರಕರಣದ ಸಮಗ್ರವಾದ ಅಧಿಕೃತ ಮಾಹಿತಿ ಹೊರಬೀಳಲಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…