ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು ಬೆಳಗ್ಗೆ ಸಕಲೇಶಪುರದಲ್ಲಿ(Sakaleshpura) ಬಂಧಿಸಲಾಗಿದೆ(Arrest) ಎಂದು ರಾಷ್ಟ್ರೀಯ ತನಿಖಾ ದಳ (NIA) ಮೂಲಗಳು ತಿಳಿಸಿವೆ.
ಏನಿದು ಪ್ರಕರಣ? : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿಯ ಉದ್ಯಮಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆರಂಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲಾಗಿತ್ತು. ಕಳೆದ ವರ್ಷ ಜನವರಿಯಲ್ಲಿ ಎನ್ಐಎ 20 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಎನ್ಐಎ ಚಾರ್ಜ್ಶೀಟ್ನ ಪ್ರಕಾರ, ಒಂದು ಸಮುದಾಯದ ಸದಸ್ಯರಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಕೋಮು ದ್ವೇಷ, ಅಶಾಂತಿಯನ್ನು ಸೃಷ್ಟಿಸಲು ಪಿಎಫ್ಐನ ಕಾರ್ಯಸೂಚಿಯ ಭಾಗವಾಗಿ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿತ್ತು.
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…