Advertisement
The Rural Mirror ಫಾಲೋಅಪ್

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |

Share

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು ಬೆಳಗ್ಗೆ ಸಕಲೇಶಪುರದಲ್ಲಿ(Sakaleshpura) ಬಂಧಿಸಲಾಗಿದೆ(Arrest) ಎಂದು ರಾಷ್ಟ್ರೀಯ ತನಿಖಾ ದಳ (NIA) ಮೂಲಗಳು ತಿಳಿಸಿವೆ.

ಏನಿದು ಪ್ರಕರಣ? : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿಯ ಉದ್ಯಮಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆರಂಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 20 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಎನ್‌ಐಎ ಚಾರ್ಜ್‌ಶೀಟ್‌ನ ಪ್ರಕಾರ, ಒಂದು ಸಮುದಾಯದ ಸದಸ್ಯರಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಕೋಮು ದ್ವೇಷ, ಅಶಾಂತಿಯನ್ನು ಸೃಷ್ಟಿಸಲು ಪಿಎಫ್‌ಐನ ಕಾರ್ಯಸೂಚಿಯ ಭಾಗವಾಗಿ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

2 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

3 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

3 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

4 hours ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

18 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

19 hours ago