ಭಾರತ ಪಾಲಿಗೆ ಎರಡು ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿರುವ ಕ್ಷಣಗಳಾದ 18 ವರ್ಷ ವಯಸ್ಸಿನ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್ ರ್ಯಾಂಕಿಂಗ್ ನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟ ನಡೆಯಲಿದೆ. ಈಗಾಗಲೇ ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಭಾರತ ಆಗಿದ್ದು ಇಂದು ಸಂಜೆ 6 ಸಮಯಕ್ಕೆ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ಮೂಲಕ ನಮ್ಮ ಭಾರತ ಇತಿಹಾಸ ಬರೆಯಲಿದೆ. ಈ ಎರಡು ಕ್ಷಣಗಳಲ್ಲಿ ಭಾರತಕ್ಕೆ ಗೆಲುವು ಸಿಗಲೆಂದು ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತಿಲ ಪರಿವಾರದ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ವಿಶ್ವವೇ ಭಾರತದ ಸಾಧನೆಗೆ ಕಣ್ಣೆತ್ತಿ ನೋಡುತ್ತಿದೆ. ಪ್ರಜ್ಞಾನಂದರಿಗೆ ಹಾಗೂ ಚಂದ್ರಯಾನ ಯಶಸ್ವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ರಾಜ್ ಶೆಟ್ಟಿ , ಪ್ರವೀಣ್ ಭಂಡಾರಿ, ರವಿ ಶೆಟ್ಟಿ, ಪ್ರಕಾಶ್, ಶನ್ಮಿತ್, ಮನೀಶ್ ಬನ್ನೂರು, ದಯಾನಂದ ರೈ ಪ್ರಾರ್ಥನೆ ಸಂದರ್ಭ ಉಪಸ್ಥಿತರಿದ್ದರು.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…