ತಲಕಾವೇರಿಯಲ್ಲಿ ಮಳೆಗಾಗಿ ಪ್ರಾರ್ಥನೆ | ಈ ಬಾರಿಯಾದರು ವರುಣದೇವ ಕೃಪೆ ತೋರಲಿ..

March 26, 2024
10:33 AM
ರಾಜ್ಯದಲ್ಲಿ ಸಮೃದ್ಧ ಮಳೆಯಾಗಲಿ ಎಂದು ಪ್ರಾರ್ಥನೆ.

ಮಳೆ(Rain) ಬಾರದೆ ರಾಜ್ಯದಾದ್ಯಂತ ಬರಗಾಲದ(Drought) ಪರಿಸ್ಥಿತಿ ಎದುರಾಗಿರುವ ಕಾರಣ ಶ್ರೀ ಕ್ಷೇತ್ರ ಭಾಗಮಂಡಲದಲ್ಲಿ(Bhagamandala) ವಿಶೇಷ ಪೂಜೆ(pooja) ಮತ್ತು ಬೆಳ್ಳಿಯ ಹರಕೆಯನ್ನು ಸಮರ್ಪಿಸಲಾಯಿತು. ವಿಶ್ವ ಹಿಂದೂ ಪರಿಷತ್(vishwa Hindu parishath) ಕೊಡಗು(kodagu) ಮತ್ತು ಬೆಂಗಳೂರು(Bengaluru) ಮಹಾನಗರ, ಬನಶಂಕರಿ ಜಿಲ್ಲೆಯ ಕಾರ್ಯಕರ್ತರ ವತಿಯಿಂದ ಪೂಜೆ ಸಲ್ಲಿಸಲಾಯಿತು.

ಜೀವನದಿ ತಲಕಾವೇರಿಯ ಪವಿತ್ರ ತೀರ್ಥಕುಂಡಿಕೆಯಲ್ಲಿ ವಿಶೇಷ ಬಾಗಿನ ಸಮರ್ಪಣೆ ನಡೆಸಿ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುವಂತೆ ತಾಯಿ ಕಾವೇರಿ ಕರುಣಿಸಿ ಹರಸಲಿ ಎಂದು ಪ್ರಾರ್ಥಿಸಲಾಯಿತು. ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ್ಯ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮಾತನಾಡಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜನರು ಮಳೆಯಿಲ್ಲದೆ ನೀರಿಲ್ಲದೆ ಬರಗಾಲದ ಪರಿಸ್ಥಿತಿಯನ್ನು ಎದುರಿಸುವಂತಾಗಿದ್ದು, ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಕಾವೇರಿನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ಮಳೆಯು ಸಕಾಲದಲ್ಲಿ ಬರಲಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror