Advertisement
ಸುದ್ದಿಗಳು

ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ

Share

ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯ ವಿಜ್ಞಾನಿಗಳು ಹವಾಮಾನವನ್ನು ಉತ್ತಮವಾಗಿ ತಿಳಿದುಕೊಳ್ಳುವ ಮತ್ತು ಮುನ್ಸೂಚನೆ ನೀಡುವ ದಿಕ್ಕಿನಲ್ಲಿ ಮಹತ್ವದ ಸಂಶೋಧನೆ ನಡೆಸಿದ್ದಾರೆ. ಸೈನ್ಸ್ ಅಡ್ವಾನ್ಸಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಅಪಾಯಕಾರಿ ಶಾಖದ ಅವಧಿಗಳು ಯಾವಾಗ ಮತ್ತು ಹೇಗೆ ಕೊನೆಗೊಳ್ಳುತ್ತವೆ ಎಂಬುದರ ಬಗ್ಗೆ ಹೊಸ ಅಧ್ಯಯನ ನಡೆಸಿದ್ದಾರೆ.

ಈ ಸಂಶೋಧನೆ ವಾತಾವರಣದ ವಿಲೋಮ ಸ್ಥಿತಿ ಮೇಲೆ ಕೇಂದ್ರೀಕೃತವಾಗಿದೆ. ಈ ಸಂದರ್ಭದಲ್ಲಿ, ಮೇಲ್ಮೈ ಸಮೀಪದ ತಂಪಾದ ಗಾಳಿಯ ಮೇಲೆ ಬೆಚ್ಚಗಿನ ಗಾಳಿಯ ಪದರ ಕುಳಿತು ಶಾಖ ಮತ್ತು ತೇವಾಂಶವನ್ನು ಒಳಗಡೆ ಬಂಧಿಸುತ್ತದೆ. ಇದರಿಂದ ಗಾಳಿ ಇನ್ನಷ್ಟು ಬಿಸಿಯಾಗಿ ಹಾಗೂ ಆರ್ದ್ರವಾಗುತ್ತಾ ದೀರ್ಘ ಮತ್ತು ತೀವ್ರ ಶಾಖದ ಅಲೆಗಳು ಉಂಟಾಗುತ್ತವೆ.

ವಿಲೋಮ ಸ್ಥಿತಿ ದುರ್ಬಲಗೊಂಡಾಗ, ಸಂಗ್ರಹಿತ ಸುಪ್ತ ಶಾಖವು ಸಂವಹನದ ರೂಪದಲ್ಲಿ ಬಿಡುಗಡೆಯಾಗಿ ಗುಡುಗು ಮಳೆಯೊಂದಿಗೆ ಶಾಖದ ಅಲೆಯನ್ನು ಅಂತ್ಯಗೊಳಿಸುತ್ತದೆ. ಈ ಪ್ರಕ್ರಿಯೆ ಆರ್ದ್ರ ಶಾಖದ ಅವಧಿಯ ಅಂತ್ಯವನ್ನು ಮುನ್ಸೂಚಿಸಲು ಪ್ರಮುಖ ಪಾತ್ರ ವಹಿಸುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಭಾರತದಂತಹ ದೇಶಗಳಲ್ಲಿ ಈ ಸಂಶೋಧನೆ ಅತ್ಯಂತ ಮಹತ್ವದ್ದಾಗಿದೆ. ದೇಶದ ಸುಮಾರು 70% ಜನರು ಈಗಾಗಲೇ ಅತಿಯಾದ ಶಾಖದ ಅಪಾಯವಿರುವ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದು, ಹೆಚ್ಚುತ್ತಿರುವ ತಾಪಮಾನ ಮತ್ತು ಆರ್ದ್ರತೆಯು ಮಾನವ ಆರೋಗ್ಯ, ಕೃಷಿ, ಮೂಲಸೌಕರ್ಯ ಮತ್ತು ಆರ್ಥಿಕ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಪ್ರಸ್ತುತ ಹವಾಮಾನ ಮುನ್ಸೂಚನಾ ಸಾಧನಗಳು ಆರ್ದ್ರ ಶಾಖದ ಅಲೆಗಳು ಯಾವಾಗ ಕೊನೆಗೊಳ್ಳುತ್ತವೆ ಎಂಬುದನ್ನು ನಿಖರವಾಗಿ ಹೇಳಲು ಕಷ್ಟಪಡುತ್ತಿವೆ.  MIT ಸಂಶೋಧನೆ ನೀಡುವ ಹೊಸ ಭೌತಿಕ ಚೌಕಟ್ಟು ಮುಂದಿನ ದಿನಗಳಲ್ಲಿ ಹವಾಮಾನ ಸಂಸ್ಥೆಗಳಿಗೆ ಹೆಚ್ಚು ನಿಖರ ಮತ್ತು ಪರಿಣಾಮಕಾರಿ ಮುನ್ಸೂಚನೆಗಳನ್ನು ನೀಡಲು ಸಹಾಯ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

Advertisement

ಮೂಲ: ಹವಾಮಾನ ಜರ್ನಲ್

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…

6 hours ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

7 hours ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

8 hours ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

8 hours ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

8 hours ago

ಹೊಟ್ಟೆಯ ಕೊಬ್ಬು ಕರಗಿಸಲು ಸೋರೆಕಾಯಿ ಜ್ಯೂಸ್

ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ.…

8 hours ago