Advertisement
ಸುದ್ದಿಗಳು

ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ

Share

ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯ ವಿಜ್ಞಾನಿಗಳು ಹವಾಮಾನವನ್ನು ಉತ್ತಮವಾಗಿ ತಿಳಿದುಕೊಳ್ಳುವ ಮತ್ತು ಮುನ್ಸೂಚನೆ ನೀಡುವ ದಿಕ್ಕಿನಲ್ಲಿ ಮಹತ್ವದ ಸಂಶೋಧನೆ ನಡೆಸಿದ್ದಾರೆ. ಸೈನ್ಸ್ ಅಡ್ವಾನ್ಸಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಅಪಾಯಕಾರಿ ಶಾಖದ ಅವಧಿಗಳು ಯಾವಾಗ ಮತ್ತು ಹೇಗೆ ಕೊನೆಗೊಳ್ಳುತ್ತವೆ ಎಂಬುದರ ಬಗ್ಗೆ ಹೊಸ ಅಧ್ಯಯನ ನಡೆಸಿದ್ದಾರೆ.

Advertisement

ಈ ಸಂಶೋಧನೆ ವಾತಾವರಣದ ವಿಲೋಮ ಸ್ಥಿತಿ ಮೇಲೆ ಕೇಂದ್ರೀಕೃತವಾಗಿದೆ. ಈ ಸಂದರ್ಭದಲ್ಲಿ, ಮೇಲ್ಮೈ ಸಮೀಪದ ತಂಪಾದ ಗಾಳಿಯ ಮೇಲೆ ಬೆಚ್ಚಗಿನ ಗಾಳಿಯ ಪದರ ಕುಳಿತು ಶಾಖ ಮತ್ತು ತೇವಾಂಶವನ್ನು ಒಳಗಡೆ ಬಂಧಿಸುತ್ತದೆ. ಇದರಿಂದ ಗಾಳಿ ಇನ್ನಷ್ಟು ಬಿಸಿಯಾಗಿ ಹಾಗೂ ಆರ್ದ್ರವಾಗುತ್ತಾ ದೀರ್ಘ ಮತ್ತು ತೀವ್ರ ಶಾಖದ ಅಲೆಗಳು ಉಂಟಾಗುತ್ತವೆ.

ವಿಲೋಮ ಸ್ಥಿತಿ ದುರ್ಬಲಗೊಂಡಾಗ, ಸಂಗ್ರಹಿತ ಸುಪ್ತ ಶಾಖವು ಸಂವಹನದ ರೂಪದಲ್ಲಿ ಬಿಡುಗಡೆಯಾಗಿ ಗುಡುಗು ಮಳೆಯೊಂದಿಗೆ ಶಾಖದ ಅಲೆಯನ್ನು ಅಂತ್ಯಗೊಳಿಸುತ್ತದೆ. ಈ ಪ್ರಕ್ರಿಯೆ ಆರ್ದ್ರ ಶಾಖದ ಅವಧಿಯ ಅಂತ್ಯವನ್ನು ಮುನ್ಸೂಚಿಸಲು ಪ್ರಮುಖ ಪಾತ್ರ ವಹಿಸುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಭಾರತದಂತಹ ದೇಶಗಳಲ್ಲಿ ಈ ಸಂಶೋಧನೆ ಅತ್ಯಂತ ಮಹತ್ವದ್ದಾಗಿದೆ. ದೇಶದ ಸುಮಾರು 70% ಜನರು ಈಗಾಗಲೇ ಅತಿಯಾದ ಶಾಖದ ಅಪಾಯವಿರುವ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದು, ಹೆಚ್ಚುತ್ತಿರುವ ತಾಪಮಾನ ಮತ್ತು ಆರ್ದ್ರತೆಯು ಮಾನವ ಆರೋಗ್ಯ, ಕೃಷಿ, ಮೂಲಸೌಕರ್ಯ ಮತ್ತು ಆರ್ಥಿಕ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಪ್ರಸ್ತುತ ಹವಾಮಾನ ಮುನ್ಸೂಚನಾ ಸಾಧನಗಳು ಆರ್ದ್ರ ಶಾಖದ ಅಲೆಗಳು ಯಾವಾಗ ಕೊನೆಗೊಳ್ಳುತ್ತವೆ ಎಂಬುದನ್ನು ನಿಖರವಾಗಿ ಹೇಳಲು ಕಷ್ಟಪಡುತ್ತಿವೆ.  MIT ಸಂಶೋಧನೆ ನೀಡುವ ಹೊಸ ಭೌತಿಕ ಚೌಕಟ್ಟು ಮುಂದಿನ ದಿನಗಳಲ್ಲಿ ಹವಾಮಾನ ಸಂಸ್ಥೆಗಳಿಗೆ ಹೆಚ್ಚು ನಿಖರ ಮತ್ತು ಪರಿಣಾಮಕಾರಿ ಮುನ್ಸೂಚನೆಗಳನ್ನು ನೀಡಲು ಸಹಾಯ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

ಮೂಲ: ಹವಾಮಾನ ಜರ್ನಲ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

15 minutes ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

8 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

8 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

8 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

8 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

18 hours ago