Advertisement
MIRROR FOCUS

ಪರಿಸರ ಸ್ನೇಹಿ ಮಣ್ಣಿನ ಮೂರ್ತಿಯತ್ತ ಒಲವು | ಗಣೇಶನ ಮೂರ್ತಿಯ ಮಣ್ಣಿನೊಳಗೆ ಬೀಜ – ಪೂಜೆಯ ಬಳಿಕ ಗಿಡ ಮರ-ಪರಿಸರ ರಕ್ಷಣೆಯ ಹೆಜ್ಜೆ |

Share

ಗಣೇಶೋತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಗಣಪನ ಭಕ್ತರಿಂದ ಗೌರಿ ಮತ್ತು ಗಣೇಶ ಮೂರ್ತಿಗಳಿಗಾಗಿ ಬೇಡಿಕೆಯೂ ಹೆಚ್ಚುತ್ತಿದೆ. ಪರಿಸರವಾದಿಗಳು ಹಾಗೂ ಸರ್ಕಾರದ ಸತತ ಜಾಗೃತಿಯಿಂದಾಗಿ ವರ್ಷದಿಂದ ವರ್ಷಕ್ಕೆ ಜನರಿಂದ ಪರಿಸರ ಸ್ನೇಹಿ ಮಣ್ಣಿನ ಮೂರ್ತಿ ಪ್ರತಿಷ್ಠಾಪನೆಗೆ ಆದ್ಯತೆ ಹೆಚ್ಚುತ್ತಿದೆ. ಹಲವು ಕಡೆ ಈ ಜಾಗೃತಿ ಬೆಳೆಯುತ್ತಿದೆ.  ಬಳ್ಳಾರಿಯಲ್ಲಿ ವಿಶೇಷ ಅಭಿಯಾನದಲ್ಲಿ ಈ ಬಾರಿ ಗಣೇಶನ ಮೂರ್ತಿಯ ಮಣ್ಣಿನೊಳಗೆ ಹಲವು ರೀತಿಯ ಹಣ್ಣಿನ ಬೀಜಗಳನ್ನು ಹುದುಗಿಸಿಡಲಾಗಿದೆ. ಪೂಜೆಯ ಬಳಿಕ ಗಣಪತಿ ವಿಸರ್ಜನೆಯ ಬಳಿಕ ಗಿಡವಾಗಿ ಫಲ ನೀಡುವ ವಿಶೇಷ ಯೋಜನೆ-ಕಾಳಜಿಯನ್ನು ವಹಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಲಾವಿದರು ಕೃತಕ ಬಣ್ಣ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ರಹಿತ, ಮಣ್ಣಿನ ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದು, ಬಣ್ಣ ಬಣ್ಣದ ಮೂರ್ತಿಗಳು ನೋಡುಗರ ಕಣ್ಮನ ಸೆಳೆಯುತ್ತಿವೆ.

ಹಲವು ವರ್ಷಗಳಿಂದ ಮಣ್ಣಿನ ಗಣೇಶಮೂರ್ತಿ ಪ್ರತಿಷ್ಠಾಪನೆ ನಡೆಸಿಕೊಂಡು ಬರುತ್ತಿದ್ದು, ಭಕ್ತರು ಮತ್ತು ನಾಗರಿಕರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ರಮೇಶ. ಗಣಪತಿ ಮೂರ್ತಿ ತಯಾರಿಕೆಯಲ್ಲಿ ತೊಡಗಿರುವ ಕಲಾವಿದೆ ಶಾರದಮ್ಮ ಮಾತನಾಡುತ್ತಾ, ವಿಘ್ನ ನಿವಾರಕ ವಿನಾಯಕನ ಮೂರ್ತಿಯಿಂದ ಪರಿಸರಕ್ಕೆ ಮಾರಕ ಆಗಬಾರದು ಎಂಬ ಉದ್ದೇಶದಿಂದ ಪರಿಸರ ಸ್ನೇಹಿ ಮೂರ್ತಿ ತಯಾರಿಕೆಗೆ ಆದ್ಯತೆ ನೀಡುತ್ತಿದ್ದೇವೆ ಎನ್ನುತ್ತಾರೆ.

ಬಳ್ಳಾರಿ ಜಿಲ್ಲಾಡಳಿತ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಪರಿಸರ ಸ್ನೇಹಿ ಮಣ್ಣಿನ ವೃಕ್ಷ ಗಣೇಶ ಮೂರ್ತಿ ರಚನಾ ಕಾರ್ಯಾಗಾರಕ್ಕೆ ಬಳ್ಳಾರಿ ನಗರದಲ್ಲಿ ಚಾಲನೆ ನೀಡಲಾಗಿತ್ತು.  ಈ ವೇಳೆ ಹಂಪಿ ವಿಶ್ವವಿದ್ಯಾಲಯದ ದೃಶ್ಯ ಕಲಾ ವಿಭಾಗದ ಸಿಬ್ಬಂದಿ ಹಾಗೂ ಪ್ರಾಧ್ಯಾಪಕ ವರ್ಗ ಪಿಒಪಿ, ಕೃತಕ ಬಣ್ಣ ರಹಿತ ಸಾವಯವ ಗಣೇಶ ಮೂರ್ತಿ ರಚಿಸುವ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಮಕ್ಕಳು ತಾವು ತಯಾರಿಸಿದ ಮೂರ್ತಿಯನ್ನು ಮನೆಗೆ ಕೊಂಡೊಯ್ದು ಪ್ರತಿಷ್ಠಾಪನೆ ಮಾಡಲಿದ್ದಾರೆ. ಗಣೇಶನ ಮೂರ್ತಿಯ ಮಣ್ಣಿನೊಳಗೆ ಹಲವು ರೀತಿಯ ನುಗ್ಗೆ, ಸೀತಾಫಲ, ಪೇರಳೆ ಇತ್ಯಾದಿ ಹಣ್ಣಿನ ಬೀಜಗಳನ್ನು ಹುದುಗಿಸಿದ್ದೇವೆ. ವಿಸರ್ಜನೆ ಬಳಿಕ ಇವು ಗಿಡ ಮರಗಳಾಗಿ ಪರಿಸರ ರಕ್ಷಣೆಗೆ ಕೊಡುವೆ ನೀಡಲಿವೆ  ಎಂದು ಅರಣ್ಯ ಇಲಾಖೆ ಜಿಲ್ಲಾ ಉಪ ಸಂರಕ್ಷಣಾಧಿಕಾರಿ ಡಾ.ಬಸವರಾಜ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

15 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago