Advertisement
ಸುದ್ದಿಗಳು

ಚಿಪ್ಸ್, ನೂಡಲ್ಸ್, ಸಂಸ್ಕರಿಸಿದ ಆಹಾರದಿಂದ ಅಕಾಲಿಕ ಮರಣ | ವಿಶ್ವ ಆರೋಗ್ಯ ಸಂಘಟನೆ ವರದಿ

Share

ಈಗಿನ ಮಕ್ಕಳಿಗೆ, ಹಾಗೆ ಯುವಕರಿಗೂ ಜಂಕ್ ಫುಡ್ ಒಂದು ಬಿಟ್ರೆ ಬೇರೆ ತಿನಿಸುಗಳೆಲ್ಲಾ ತಿನಿಸೇ ಅಲ್ಲ. ಅಷ್ಟರ ಮಟ್ಟಿಗೆ ಇದಕ್ಕೆ ಜೋತು ಬಿದ್ದಿದ್ದಾರೆ. ಇದನ್ನು ತಿನ್ನುವ ಅಭ್ಯಾಸ  ಇರುವವರಿಗೆ ಇಲ್ಲಿದೆ ಎಚ್ಚರಿಕೆಯ ಸುದ್ದಿ.

Advertisement
ದೇಹದಲ್ಲಿನ ನೀರು ಮತ್ತು ಖನಿಜಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸೋಡಿಯಂ ಪ್ರಮುಖ ಪೋಷಕಾಂಶವಾಗಿದೆ. ಸೋಡಿಯಂ ಅಂದರೆ ಉಪ್ಪಿನ ಅಧಿಕ ಸೇವನೆಯು ಅನೇಕ ದೀರ್ಘಕಾಲದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.

ದೇಹದ ಸಮತೋಲನವನ್ನು ಕಾಪಾಡಿಕೊಳ್ಳಲು ಸೋಡಿಯಂ ಪ್ರಮುಖ ಪೋಷಕಾಂಶವಾಗಿದ್ದರೂ, ಹೆಚ್ಚಿನ ಪ್ರಮಾಣದ ಸೋಡಿಯಂ ಸೇವನೆಯು ಅನೇಕ ದೀರ್ಘಕಾಲದ ಕಾಯಿಲೆಯ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಇದು ಅಕಾಲಿಕ ಮರಣದ ಅಪಾಯವನ್ನು ಉಂಟುಮಾಡುತ್ತದೆ. ಹೆಚ್ಚು ಉಪ್ಪನ್ನು ತಿನ್ನುವುದರಿಂದ ಇದು ನಮ್ಮ ಹೃದಯದ ಕಾಯಿಲೆ, ಪಾರ್ಶ್ವವಾಯು ಮತ್ತು ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ.

ವಿಶ್ವಸಂಸ್ಥೆಯ ವಿಶ್ವ ಆರೋಗ್ಯ ಸಂಘಟನೆಯ ಸೋಡಿಯಂ ಸೇವನೆಯ ಕಡಿತದ ಕುರಿತ ಮೊದಲ ಜಾಗತಿಕ ವರದಿಯು 2025ರ ವೇಳೆಗೆ ಪ್ರಪಂಚವು ಸೋಡಿಯಂ ಸೇವನೆಯನ್ನು 30% ನಷ್ಟು ಕಡಿಮೆ ಮಾಡುವ ಜಾಗತಿಕ ಗುರಿಯನ್ನು ಸಾಧಿಸಲು ಹೊರಗುಳಿದಿದೆ ಎಂದು ತೋರಿಸುತ್ತದೆ. ಹಾಗೂ WHO ಸದಸ್ಯ ರಾಷ್ಟ್ರಗಳಲ್ಲಿ 5% ಮಾತ್ರ ಕಡ್ಡಾಯ ಹಾಗೂ ಸಮಗ್ರ ಸೋಡಿಯಂ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ವರದಿ ಹೇಳಿದೆ.

ದೇಹದಲ್ಲಿನ ನೀರು ಮತ್ತು ಖನಿಜಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸೋಡಿಯಂ ಪ್ರಮುಖ ಪೋಷಕಾಂಶವಾಗಿದೆ. ಸೋಡಿಯಂ ಅಂದರೆ ಉಪ್ಪಿನ ಅಧಿಕ ಸೇವನೆಯು ಅನೇಕ ದೀರ್ಘಕಾಲದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ ಹಾಗೂ ಅಕಾಲಿಕ ಮರಣಕ್ಕೂ ಕಾರಣವಾಗುತ್ತದೆ.

ಸೋಡಿಯಂನ ಮುಖ್ಯ ಮೂಲವೆಂದರೆ ಪುಡಿ ಉಪ್ಪು (ಸೋಡಿಯಂ ಕ್ಲೋರೈಡ್), ಆದರೆ ಇದು ಸೋಡಿಯಂ ಗ್ಲುಟಮೇಟ್‌ನಂತಹ ಇತರ ಅಂಶಗಳನ್ನೂ ಹೊಂದಿದೆ. ಫಾಸ್ಟ್ ಫುಡ್, ಚಿಪ್ಸ್, ಸಂಸ್ಕರಿಸಿದ ತಿಂಡಿಗಳು, ಸೂಪ್‌ಗಳು, ಸಂಸ್ಕರಿಸಿದ ಮಾಂಸಗಳು, ಇನ್‌ಸ್ಟೆಂಟ್ ನೂಡಲ್ಸ್ ಇವೆಲ್ಲವೂ ಹೆಚ್ಚಾಗಿ ಸೋಡಿಯಂ ಗ್ಲುಟಮೇಟ್‌ನ್ನು ಹೊಂದಿರುತ್ತದೆ. ಹಾಗೂ ಇಂತಹ ಆಹಾರ ಪದಾರ್ಥಗಳ ನಿಯಮಿತ ಸೇವನೆಯು ನಮ್ಮ ಆರೋಗ್ಯದ ಮೇಲೆ ಹಾನಿಯುಂಟುಮಾಡುತ್ತವೆ.

ಹೆಚ್ಚಿನ ಪ್ರಮಾಣದ ಸೋಡಿಯಂ ಸೇವನೆಯು ಗ್ಯಾಸ್ಟಿಕ್, ಕ್ಯಾನ್ಸರ್, ಸ್ಥೂಲಕಾಯತೆ, ಆಸ್ಟಿಯೊಪೊರೋಸಿಸ್ ಮತ್ತು ಮೂತ್ರಪಿಂಡದ ಕಾಯಿಲೆಯಂತಹ ಆರೋಗ್ಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳಬಹುದು ಎಂದು ವರದಿ ಹೇಳುತ್ತದೆ. ಆರೋಗ್ಯಕರವಲ್ಲದ ಆಹಾರಗಳ ಸೇವನೆಯು ಹಾಗೂ ಅತಿಯಾದ ಸೋಡಿಯಂ ಸೇವನೆಯು ಜಾಗತಿಕ ಮಟ್ಟದಲ್ಲಿ ಅಕಾಲಿಕ ಮರಣ ಮತ್ತು ಸಾವುಗಳಿಗೆ ಮುಖ್ಯ ಕಾರಣ ಎಂದು WHO ನ ಮಹಾನಿರ್ದೇಶಕ ಡಾ. ಟೆಡ್ರೋಸ್ ಅಧಾನಮ್ ಘೆಬ್ರೆಯೆಸಸಸ್ ಹೇಳಿದರು.

ಹೆಚ್ಚಿನ ದೇಶಗಳಲ್ಲಿ ಇನ್ನೂ ಯಾವುದೇ ಕಡ್ಡಾಯ ಸೋಡಿಯಂ ಕಡಿತ ನೀತಿಗಳನ್ನು ಅಳವಡಿಸಿಲ್ಲ ಎಂದು WHO ವರದಿ ಹೇಳುತ್ತದೆ. ರಾಷ್ಟ್ರಗಳು ಕಠಿಣ ಕ್ರಮಗಳನ್ನು ಅನುಸರಿಸದೆ ತಮ್ಮ ಜನರನ್ನು ಹೃದಯಾಘಾತ, ಪಾರ್ಶ್ವವಾಯು ಮತ್ತು ಇತರ ಆರೋಗ್ಯ ಸಮಸ್ಯೆಗಳ ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಹೇಳಿದೆ. ಸೋಡಿಯಂ ಸೇವನೆ ಕಡಿತಕ್ಕಾಗಿ ‘ಬೆಸ್ಟ್ ಬೈಸ್’ನ್ನು ಜಾರಿಗೆ ತರಲು WHO ಎಲ್ಲಾ ದೇಶಗಳಿಗೆ ಕರೆ ನೀಡಿದೆ. ಮತ್ತು ಆಹಾರ ತಯಾರಕರ ಮೇಲೆ ಸೋಡಿಯಂ ಮಟ್ಟದ ಮಾನದಂಡವನ್ನು ಅಳವಡಿಸಲು ಕೆಲವೊಂದು ನೀತಿಗಳನ್ನು ಜಾರಿಗೆ ತಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

13 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

19 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

23 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

23 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

23 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago