Advertisement
MIRROR FOCUS

#Arecanut | ಹೊಸ ಚಾಲಿ ಅಡಿಕೆಗೆ ಧಾರಣೆ ನಿಗದಿ | 365 ರೂಪಾಯಿಗೆ ಖಾತೆ ತೆರೆದ ಚಾಲಿ ಹೊಸ ಅಡಿಕೆ | ಏನಾಗಬಹುದು ಈ ಬಾರಿಯ ಅಡಿಕೆ ಮಾರುಕಟ್ಟೆ.. ?

Share

ಚಾಲಿ ಹೊಸ ಅಡಿಕೆಗೆ ಧಾರಣೆ ನಿಗದಿಯಾಗಿದೆ. ಸದ್ಯ 365 ರೂಪಾಯಿ ಗರಿಷ್ಟ ಹಾಗೂ 330 ರೂಪಾಯಿ ಕನಿಷ್ಟ ಧಾರಣೆ ನಿಗದಿಯಾಗಿದೆ. ಕ್ಯಾಂಪ್ಕೋ ಹೊಸ ಅಡಿಕೆ ಧಾರಣೆ ನಿಗದಿಪಡಿಸಿದೆ. ಇದೇ ವೇಳೆ ಖಾಸಗಿ ವಲಯದಲ್ಲೂ ಹೊಸ ಚಾಲಿ ಅಡಿಕೆ ಧಾರಣೆಯು 360 ಆಸುಪಾಸಿನ ಗರಿಷ್ಟ ಧಾರಣೆ ನಿಗದಿ ಪಡಿಸಿದೆ. ಹೊಸ ಅಡಿಕೆ ಇನ್ನಷ್ಟೇ ಮಾರುಕಟ್ಟೆ ಪ್ರವೇಶ ಮಾಡಬೇಕಿದೆ. 

ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅಡಿಕೆ ಹೆಚ್ಚು ಪ್ರಮಾಣದಲ್ಲಿ ಬೀಳಲು ಪ್ರಾರಂಭವಾಗಿದೆ. ಚಾಲಿ ಅಡಿಕೆ ಮಾಡುವ ಕೃಷಿಕರು ಅಡಿಕೆ ಒಣಗಿಸುವತ್ತ ಗಮನಹರಿಸಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಹೊಸ ಅಡಿಕೆ ಮಾರುಕಟ್ಟೆ ಪ್ರವೇಶ ಮಾಡುವ ಸಾಧ್ಯತೆ ಇದೆ.ಈ ಬಾರಿ ಅಡಿಕೆಯ ಕೊಳೆರೋಗ ಪ್ರಮಾಣ ತೀರಾ ಕಡಿಮೆಯಾಗಿತ್ತು. ಆದರೆ ಬೇಸಗೆಯ ಸಂದರ್ಭ ನೀರಿನ ಕೊರತೆ ಹಾಗೂ ವಿಪರೀತ ಬಿಸಿಲಿನ ಕಾರಣದಿಂದ ಎಳೆ ಅಡಿಕೆ ವಿಪರೀತವಾಗಿ ಉದುರಿ ಬೆಳೆಗಾರರಿಗೆ ಫಸಲಿನ ಕೊರತೆ ಕಾಡಿತ್ತು. ಹೀಗಾಗಿ ಅಡಿಕೆ ಫಸಲು ಕಳೆದ ವರ್ಷದ ಮಾದರಿಯಲ್ಲಿಯೇ ಇರಬಹುದು ಎನ್ನುವ ನಿರೀಕ್ಷೆ ಮಾರುಕಟ್ಟೆ ವಲಯದ್ದಾಗಿದೆ.

ಈ ಬಾರಿಯ ಅಡಿಕೆ ಮಾರುಕಟ್ಟೆ ಹೇಗಿರಲಿದೆ ಎನ್ನುವ ಚರ್ಚೆ ಎಲ್ಲೆಡೆ ಇದೆ. ಸದ್ಯದ ಮಾರುಕಟ್ಟೆ ಮಾಹಿತಿ ಪ್ರಕಾರ ಹೊಸ ಚಾಲಿ ಅಡಿಕೆ 400 ರೂಪಾಯಿ ಹಾಗೂ ಹಳೆ ಅಡಿಕೆ 425 ರೂಪಾಯಿ ಆಸುಪಾಸಿಗೆ ಸದ್ಯಕ್ಕೆ ಇರಲಿದೆ. ನವೆಂಬರ್‌ -ಡಿಸೆಂಬರ್‌ ಬಳಿಕ ಧಾರಣೆ ಏರಿಕೆ ಕಾಣಬಹುದು ಎನ್ನುವುದು  ಸದ್ಯದ ನಿರೀಕ್ಷೆ.

ಮಾರುಕಟ್ಟೆ ವಿಶ್ಲೇಷಣೆ ಪ್ರಕಾರ ಅಡಿಕೆ ಧಾರಣೆ ವಿಪರೀತವಾಗಿ ಏರಿಕೆಯಾದರೆ ಖರೀದಿದಾರರು ಹಾಗೂ ವ್ಯಾಪಾರಿಗಳಿಗೆ ಹೆಚ್ಚಿನ ಸಂದರ್ಭ ನಷ್ಟ ಉಂಟಾಗುತ್ತಿದೆ. ಮಾತ್ರವಲ್ಲ ಬೆಲೆ ಏರಿಕೆಯ ಕಾರಣದಿಂದ ಅಡಿಕೆ ವಹಿವಾಟು ನಿಧಾನವಾಗುತ್ತದೆ. ವಹಿವಾಟು ನಿಧಾನವಾಗುವ ಕಾರಣದಿಂದ ಲಾಭದ ಪ್ರಮಾಣವೂ ಕಡಿಮೆಯಾಗುತ್ತಿದೆ. ಹೀಗಾಗಿ ವಿಪರೀತ ಹೆಚ್ಚಿನ ಧಾರಣೆಯ ಕಾರಣದಿಂದ ವ್ಯಾಪಾರಿಗಳೂ ಖರೀದಿಗೆ ಉತ್ಸಾಹ ತೋರುತ್ತಿಲ್ಲ, ಕಡಿಮೆ ಗುಣಮಟ್ಟದ ಕಳಪೆ ಅಡಿಕೆ, ಬರ್ಮಾ ಅಡಿಕೆಯನ್ನೂ ಹೆಚ್ಚಾಗಿ ಖರೀದಿ ಮಾಡುತ್ತಾರೆ ಎನ್ನುವುದು ಮಾರುಕಟ್ಟೆಯ ಮಾಹಿತಿ.

ಹೀಗಾಗಿ ಈ ಬಾರಿ ಅಡಿಕೆ ಧಾರಣೆ ಭಾರೀ ಪ್ರಮಾಣದಲ್ಲಿ ಏರಿಕೆ ನಿರೀಕ್ಷೆ ಕಷ್ಟ. ಕಳೆದ ಬಾರಿ ಚಾಲಿ ಅಡಿಕೆ ಧಾರಣೆ 500 ಗಡಿ ದಾಟಿರಲಿಲ್ಲ. ಈ ಬಾರಿಯೂ 500 ರೂಪಾಯಿ ಗಡಿ ದಾಟುವ ಸಾಧ್ಯತೆ ಕಡಿಮೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

5 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

14 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

15 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

15 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

1 day ago