ಚಾಲಿ ಹೊಸ ಅಡಿಕೆಗೆ ಧಾರಣೆ ನಿಗದಿಯಾಗಿದೆ. ಸದ್ಯ 365 ರೂಪಾಯಿ ಗರಿಷ್ಟ ಹಾಗೂ 330 ರೂಪಾಯಿ ಕನಿಷ್ಟ ಧಾರಣೆ ನಿಗದಿಯಾಗಿದೆ. ಕ್ಯಾಂಪ್ಕೋ ಹೊಸ ಅಡಿಕೆ ಧಾರಣೆ ನಿಗದಿಪಡಿಸಿದೆ. ಇದೇ ವೇಳೆ ಖಾಸಗಿ ವಲಯದಲ್ಲೂ ಹೊಸ ಚಾಲಿ ಅಡಿಕೆ ಧಾರಣೆಯು 360 ಆಸುಪಾಸಿನ ಗರಿಷ್ಟ ಧಾರಣೆ ನಿಗದಿ ಪಡಿಸಿದೆ. ಹೊಸ ಅಡಿಕೆ ಇನ್ನಷ್ಟೇ ಮಾರುಕಟ್ಟೆ ಪ್ರವೇಶ ಮಾಡಬೇಕಿದೆ.
ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅಡಿಕೆ ಹೆಚ್ಚು ಪ್ರಮಾಣದಲ್ಲಿ ಬೀಳಲು ಪ್ರಾರಂಭವಾಗಿದೆ. ಚಾಲಿ ಅಡಿಕೆ ಮಾಡುವ ಕೃಷಿಕರು ಅಡಿಕೆ ಒಣಗಿಸುವತ್ತ ಗಮನಹರಿಸಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಹೊಸ ಅಡಿಕೆ ಮಾರುಕಟ್ಟೆ ಪ್ರವೇಶ ಮಾಡುವ ಸಾಧ್ಯತೆ ಇದೆ.ಈ ಬಾರಿ ಅಡಿಕೆಯ ಕೊಳೆರೋಗ ಪ್ರಮಾಣ ತೀರಾ ಕಡಿಮೆಯಾಗಿತ್ತು. ಆದರೆ ಬೇಸಗೆಯ ಸಂದರ್ಭ ನೀರಿನ ಕೊರತೆ ಹಾಗೂ ವಿಪರೀತ ಬಿಸಿಲಿನ ಕಾರಣದಿಂದ ಎಳೆ ಅಡಿಕೆ ವಿಪರೀತವಾಗಿ ಉದುರಿ ಬೆಳೆಗಾರರಿಗೆ ಫಸಲಿನ ಕೊರತೆ ಕಾಡಿತ್ತು. ಹೀಗಾಗಿ ಅಡಿಕೆ ಫಸಲು ಕಳೆದ ವರ್ಷದ ಮಾದರಿಯಲ್ಲಿಯೇ ಇರಬಹುದು ಎನ್ನುವ ನಿರೀಕ್ಷೆ ಮಾರುಕಟ್ಟೆ ವಲಯದ್ದಾಗಿದೆ.
ಈ ಬಾರಿಯ ಅಡಿಕೆ ಮಾರುಕಟ್ಟೆ ಹೇಗಿರಲಿದೆ ಎನ್ನುವ ಚರ್ಚೆ ಎಲ್ಲೆಡೆ ಇದೆ. ಸದ್ಯದ ಮಾರುಕಟ್ಟೆ ಮಾಹಿತಿ ಪ್ರಕಾರ ಹೊಸ ಚಾಲಿ ಅಡಿಕೆ 400 ರೂಪಾಯಿ ಹಾಗೂ ಹಳೆ ಅಡಿಕೆ 425 ರೂಪಾಯಿ ಆಸುಪಾಸಿಗೆ ಸದ್ಯಕ್ಕೆ ಇರಲಿದೆ. ನವೆಂಬರ್ -ಡಿಸೆಂಬರ್ ಬಳಿಕ ಧಾರಣೆ ಏರಿಕೆ ಕಾಣಬಹುದು ಎನ್ನುವುದು ಸದ್ಯದ ನಿರೀಕ್ಷೆ.
ಮಾರುಕಟ್ಟೆ ವಿಶ್ಲೇಷಣೆ ಪ್ರಕಾರ ಅಡಿಕೆ ಧಾರಣೆ ವಿಪರೀತವಾಗಿ ಏರಿಕೆಯಾದರೆ ಖರೀದಿದಾರರು ಹಾಗೂ ವ್ಯಾಪಾರಿಗಳಿಗೆ ಹೆಚ್ಚಿನ ಸಂದರ್ಭ ನಷ್ಟ ಉಂಟಾಗುತ್ತಿದೆ. ಮಾತ್ರವಲ್ಲ ಬೆಲೆ ಏರಿಕೆಯ ಕಾರಣದಿಂದ ಅಡಿಕೆ ವಹಿವಾಟು ನಿಧಾನವಾಗುತ್ತದೆ. ವಹಿವಾಟು ನಿಧಾನವಾಗುವ ಕಾರಣದಿಂದ ಲಾಭದ ಪ್ರಮಾಣವೂ ಕಡಿಮೆಯಾಗುತ್ತಿದೆ. ಹೀಗಾಗಿ ವಿಪರೀತ ಹೆಚ್ಚಿನ ಧಾರಣೆಯ ಕಾರಣದಿಂದ ವ್ಯಾಪಾರಿಗಳೂ ಖರೀದಿಗೆ ಉತ್ಸಾಹ ತೋರುತ್ತಿಲ್ಲ, ಕಡಿಮೆ ಗುಣಮಟ್ಟದ ಕಳಪೆ ಅಡಿಕೆ, ಬರ್ಮಾ ಅಡಿಕೆಯನ್ನೂ ಹೆಚ್ಚಾಗಿ ಖರೀದಿ ಮಾಡುತ್ತಾರೆ ಎನ್ನುವುದು ಮಾರುಕಟ್ಟೆಯ ಮಾಹಿತಿ.
ಹೀಗಾಗಿ ಈ ಬಾರಿ ಅಡಿಕೆ ಧಾರಣೆ ಭಾರೀ ಪ್ರಮಾಣದಲ್ಲಿ ಏರಿಕೆ ನಿರೀಕ್ಷೆ ಕಷ್ಟ. ಕಳೆದ ಬಾರಿ ಚಾಲಿ ಅಡಿಕೆ ಧಾರಣೆ 500 ಗಡಿ ದಾಟಿರಲಿಲ್ಲ. ಈ ಬಾರಿಯೂ 500 ರೂಪಾಯಿ ಗಡಿ ದಾಟುವ ಸಾಧ್ಯತೆ ಕಡಿಮೆ ಇದೆ.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…