Advertisement
MIRROR FOCUS

#Arecanut | ಹೊಸ ಚಾಲಿ ಅಡಿಕೆಗೆ ಧಾರಣೆ ನಿಗದಿ | 365 ರೂಪಾಯಿಗೆ ಖಾತೆ ತೆರೆದ ಚಾಲಿ ಹೊಸ ಅಡಿಕೆ | ಏನಾಗಬಹುದು ಈ ಬಾರಿಯ ಅಡಿಕೆ ಮಾರುಕಟ್ಟೆ.. ?

Share

ಚಾಲಿ ಹೊಸ ಅಡಿಕೆಗೆ ಧಾರಣೆ ನಿಗದಿಯಾಗಿದೆ. ಸದ್ಯ 365 ರೂಪಾಯಿ ಗರಿಷ್ಟ ಹಾಗೂ 330 ರೂಪಾಯಿ ಕನಿಷ್ಟ ಧಾರಣೆ ನಿಗದಿಯಾಗಿದೆ. ಕ್ಯಾಂಪ್ಕೋ ಹೊಸ ಅಡಿಕೆ ಧಾರಣೆ ನಿಗದಿಪಡಿಸಿದೆ. ಇದೇ ವೇಳೆ ಖಾಸಗಿ ವಲಯದಲ್ಲೂ ಹೊಸ ಚಾಲಿ ಅಡಿಕೆ ಧಾರಣೆಯು 360 ಆಸುಪಾಸಿನ ಗರಿಷ್ಟ ಧಾರಣೆ ನಿಗದಿ ಪಡಿಸಿದೆ. ಹೊಸ ಅಡಿಕೆ ಇನ್ನಷ್ಟೇ ಮಾರುಕಟ್ಟೆ ಪ್ರವೇಶ ಮಾಡಬೇಕಿದೆ. 

Advertisement
Advertisement

ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಅಡಿಕೆ ಹೆಚ್ಚು ಪ್ರಮಾಣದಲ್ಲಿ ಬೀಳಲು ಪ್ರಾರಂಭವಾಗಿದೆ. ಚಾಲಿ ಅಡಿಕೆ ಮಾಡುವ ಕೃಷಿಕರು ಅಡಿಕೆ ಒಣಗಿಸುವತ್ತ ಗಮನಹರಿಸಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಹೊಸ ಅಡಿಕೆ ಮಾರುಕಟ್ಟೆ ಪ್ರವೇಶ ಮಾಡುವ ಸಾಧ್ಯತೆ ಇದೆ.ಈ ಬಾರಿ ಅಡಿಕೆಯ ಕೊಳೆರೋಗ ಪ್ರಮಾಣ ತೀರಾ ಕಡಿಮೆಯಾಗಿತ್ತು. ಆದರೆ ಬೇಸಗೆಯ ಸಂದರ್ಭ ನೀರಿನ ಕೊರತೆ ಹಾಗೂ ವಿಪರೀತ ಬಿಸಿಲಿನ ಕಾರಣದಿಂದ ಎಳೆ ಅಡಿಕೆ ವಿಪರೀತವಾಗಿ ಉದುರಿ ಬೆಳೆಗಾರರಿಗೆ ಫಸಲಿನ ಕೊರತೆ ಕಾಡಿತ್ತು. ಹೀಗಾಗಿ ಅಡಿಕೆ ಫಸಲು ಕಳೆದ ವರ್ಷದ ಮಾದರಿಯಲ್ಲಿಯೇ ಇರಬಹುದು ಎನ್ನುವ ನಿರೀಕ್ಷೆ ಮಾರುಕಟ್ಟೆ ವಲಯದ್ದಾಗಿದೆ.

Advertisement

ಈ ಬಾರಿಯ ಅಡಿಕೆ ಮಾರುಕಟ್ಟೆ ಹೇಗಿರಲಿದೆ ಎನ್ನುವ ಚರ್ಚೆ ಎಲ್ಲೆಡೆ ಇದೆ. ಸದ್ಯದ ಮಾರುಕಟ್ಟೆ ಮಾಹಿತಿ ಪ್ರಕಾರ ಹೊಸ ಚಾಲಿ ಅಡಿಕೆ 400 ರೂಪಾಯಿ ಹಾಗೂ ಹಳೆ ಅಡಿಕೆ 425 ರೂಪಾಯಿ ಆಸುಪಾಸಿಗೆ ಸದ್ಯಕ್ಕೆ ಇರಲಿದೆ. ನವೆಂಬರ್‌ -ಡಿಸೆಂಬರ್‌ ಬಳಿಕ ಧಾರಣೆ ಏರಿಕೆ ಕಾಣಬಹುದು ಎನ್ನುವುದು  ಸದ್ಯದ ನಿರೀಕ್ಷೆ.

ಮಾರುಕಟ್ಟೆ ವಿಶ್ಲೇಷಣೆ ಪ್ರಕಾರ ಅಡಿಕೆ ಧಾರಣೆ ವಿಪರೀತವಾಗಿ ಏರಿಕೆಯಾದರೆ ಖರೀದಿದಾರರು ಹಾಗೂ ವ್ಯಾಪಾರಿಗಳಿಗೆ ಹೆಚ್ಚಿನ ಸಂದರ್ಭ ನಷ್ಟ ಉಂಟಾಗುತ್ತಿದೆ. ಮಾತ್ರವಲ್ಲ ಬೆಲೆ ಏರಿಕೆಯ ಕಾರಣದಿಂದ ಅಡಿಕೆ ವಹಿವಾಟು ನಿಧಾನವಾಗುತ್ತದೆ. ವಹಿವಾಟು ನಿಧಾನವಾಗುವ ಕಾರಣದಿಂದ ಲಾಭದ ಪ್ರಮಾಣವೂ ಕಡಿಮೆಯಾಗುತ್ತಿದೆ. ಹೀಗಾಗಿ ವಿಪರೀತ ಹೆಚ್ಚಿನ ಧಾರಣೆಯ ಕಾರಣದಿಂದ ವ್ಯಾಪಾರಿಗಳೂ ಖರೀದಿಗೆ ಉತ್ಸಾಹ ತೋರುತ್ತಿಲ್ಲ, ಕಡಿಮೆ ಗುಣಮಟ್ಟದ ಕಳಪೆ ಅಡಿಕೆ, ಬರ್ಮಾ ಅಡಿಕೆಯನ್ನೂ ಹೆಚ್ಚಾಗಿ ಖರೀದಿ ಮಾಡುತ್ತಾರೆ ಎನ್ನುವುದು ಮಾರುಕಟ್ಟೆಯ ಮಾಹಿತಿ.

Advertisement

ಹೀಗಾಗಿ ಈ ಬಾರಿ ಅಡಿಕೆ ಧಾರಣೆ ಭಾರೀ ಪ್ರಮಾಣದಲ್ಲಿ ಏರಿಕೆ ನಿರೀಕ್ಷೆ ಕಷ್ಟ. ಕಳೆದ ಬಾರಿ ಚಾಲಿ ಅಡಿಕೆ ಧಾರಣೆ 500 ಗಡಿ ದಾಟಿರಲಿಲ್ಲ. ಈ ಬಾರಿಯೂ 500 ರೂಪಾಯಿ ಗಡಿ ದಾಟುವ ಸಾಧ್ಯತೆ ಕಡಿಮೆ ಇದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

3 hours ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

4 hours ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

4 hours ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

5 hours ago

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

22 hours ago