Advertisement
ಸುದ್ದಿಗಳು

#GaneshaFestival | ಇದು ಸಿಹಿ ಸಿಹಿ ಗಣಪತಿ | ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪ ತಯಾರಿ | ಪರಿಸರ ಸ್ನೇಹಿ ಬೆಲ್ಲದ ಗಣಪನಿಗೆ ಭಾರಿ ಬೇಡಿಕೆ |

Share

ಗಣೇಶ ಹಬ್ಬಕ್ಕೆ ಇನ್ನೇನು 2-3 ತಿಂಗಳು ಬಾಕಿ ಇರುವಾಗಲೇ ಗಣೇಶ ಮೂರ್ತಿ ತಯಾರಕರು ತಯಾರಿ ನಡೆಸುತ್ತಾರೆ. ಎಲ್ಲಿ ನೋಡಿದರಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನದ್ದೇ ಭರಾಟೆ. ಪರಿಸರ ಕಾಳಜಿ ಹಿನ್ನೆಲೆಯಲ್ಲಿ ಪಿಓಪಿ ಗಣೇಶ ಮೂರ್ತಿಗಳನ್ನು ಬ್ಯಾನ್‌ ಮಾಡಿದ್ರೂ, ಅದರ ಹಾವಳಿ ನಿಂತಿಲ್ಲ. ಆದರೆ ಇತ್ತೀಚೆಗೆ ಜನರೇ ಹೆಚ್ಚು ಪರಿಸರ ಸ್ನೇಹಿ ಗಣಪತಿ (Natural) ಮೂರ್ತಿಗಳ ಮೊರೆ ಹೋಗ್ತಿದ್ದಾರೆ. ಹಾಗಾಗಿ ತಯಾರಕರು ಹೆಚ್ಚು ಪರಿಸರ ಸ್ನೇಹಿ ಮೂರ್ತಿಗಳನ್ನೇ ತಯಾರುತ್ತಿದ್ದಾರೆ. ಇದೀಗ ಬೆಲ್ಲದ (Jaggery)  ಗಣಪನ ಮೂರ್ತಿಯನ್ನು  ಸಕ್ಕರೆನಾಡು ಮಂಡ್ಯದಲ್ಲಿದಲ್ಲಿ ತಯಾರಿಸಿ ಈಗ ಬೆಲ್ಲದ ಗಣಪನದ್ದೇ ಹವಾ. ಬೆಲ್ಲದಿಂದ ತಯಾರಾದ ಗಣಪನಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದೆ.

Advertisement
Advertisement
Advertisement
Advertisement

ಮಂಡ್ಯ ಅಂದ್ರೆ ಬರಿ ಸಕ್ಕರೆನಾಡಲ್ಲಾ. ಮಂಡ್ಯ ಬೆಲ್ಲಕ್ಕೂ ಈಗ ಸಾಕಷ್ಟು ಬೇಡಿಕೆ ಇದೆ. ಈಗ ಮಂಡ್ಯ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪನನ್ನ ತಯಾರು ಮಾಡಲಾಗ್ತಿದೆ. ಕೆಮಿಕಲ್ ಇಲ್ಲದ ಪಕ್ಕಾ ಪರಿಸರ ಸ್ನೇಹಿ ಬೆಲ್ಲದ ಗಣಪನನ್ನ ತಯಾರು ಮಾಡಿದ್ದಾರೆ.

Advertisement

ಕಡಿಮೆ ಖರ್ಚಿನಲ್ಲಿ ತಯಾರು: ಮಂಡ್ಯದ ವಿಕಾಸನ ಸಂಸ್ಥೆಯ ಸಹಯೋಗದೊಂದಿಗೆ ಹಳುವಾಡಿ ಗ್ರಾಮದ ತಮ್ಮಯ್ಯ ಎಂಬುವವರು ತಮ್ಮ ಹಾಲೆ ಮನೆಯಲ್ಲಿ ಗಣೇಶನ ಮೂರ್ತಿಗಳನ್ನ ತಯಾರು ಮಾಡ್ತಿದ್ದಾರೆ. ಸುಮಾರು 2 ಅಡಿ ಎತ್ತರದಷ್ಟು ಗಣೇಶ ಮೂರ್ತಿ ಹಾಗೂ ಅರ್ಧ ಅಡಿ ಎತ್ತರದಷ್ಟು ಗೌರಿ ಮೂರ್ತಿಗಳನ್ನ ಸಹ ತಯಾರು ಮಾಡಲಾಗ್ತಿದೆ. ಈ ಗಣೇಶ ಮೂರ್ತಿ ಅತಿ ಕಡಿಮೆ ಖರ್ಚಿನಲ್ಲಿ ತಯಾರು ಮಾಡಲಾಗ್ತಿದ್ದು, ಗಣೇಶ ಮೂರ್ತಿ ಕೊಂಡುಕೊಳ್ಳುವವರಿಗೂ ಇದು ಕೈಗೆಟುಕುವ ಬೆಲೆಗೆ ದೊರಕುತ್ತಿದೆ.

Advertisement

ಹಲವು ಜಿಲ್ಲೆಗಳಿಂದ ಬೇಡಿಕೆ : ಸದ್ಯ ಮಂಡ್ಯ ಬೆಲ್ಲದ ಗಣಪನಿಗೆ ರಾಜ್ಯದ ಹಲವು ಜಿಲ್ಲೆಗಳಿಂದ ಬೇಡಿಕೆ ಹೆಚ್ಚಾಗಿದೆ. ಅಲ್ಲದೆ ವಿಸರ್ಜನೆ ಸಂದರ್ಭದಲ್ಲಿ ಕೂಡ ನೀರಿಗೆ ಗಣಪನನ್ನ ಬಿಟ್ಟ ಬಳಿಕ ಬಹು ಬೇಗ ನೀರಿನಲ್ಲಿ ಗಣಪತಿ ಕರಗಲಿದೆ. ಹೀಗಾಗಿ ನೀವು ಕೂಡ ಈ ಬಾರಿ ಬೆಲ್ಲದ ಗಣಪತಿಗೆ ಜೈ ಎನ್ನುವ ಮೂಲಕ ಪರಿಸರಕ್ಕೆ ಹಾನಿಯೂಂಟು ಮಾಡುವ ಪಿಒಪಿ ಹಾಗೂ ವಿಷಕಾರಿ ಬಣ್ಣದ ಗಣಪನಿಗೆ ಗುಡ್ ಬೈ ಹೇಳಿ.

Source : Digital Media

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago