ಗಣೇಶ ಹಬ್ಬಕ್ಕೆ ಇನ್ನೇನು 2-3 ತಿಂಗಳು ಬಾಕಿ ಇರುವಾಗಲೇ ಗಣೇಶ ಮೂರ್ತಿ ತಯಾರಕರು ತಯಾರಿ ನಡೆಸುತ್ತಾರೆ. ಎಲ್ಲಿ ನೋಡಿದರಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ನದ್ದೇ ಭರಾಟೆ. ಪರಿಸರ ಕಾಳಜಿ ಹಿನ್ನೆಲೆಯಲ್ಲಿ ಪಿಓಪಿ ಗಣೇಶ ಮೂರ್ತಿಗಳನ್ನು ಬ್ಯಾನ್ ಮಾಡಿದ್ರೂ, ಅದರ ಹಾವಳಿ ನಿಂತಿಲ್ಲ. ಆದರೆ ಇತ್ತೀಚೆಗೆ ಜನರೇ ಹೆಚ್ಚು ಪರಿಸರ ಸ್ನೇಹಿ ಗಣಪತಿ (Natural) ಮೂರ್ತಿಗಳ ಮೊರೆ ಹೋಗ್ತಿದ್ದಾರೆ. ಹಾಗಾಗಿ ತಯಾರಕರು ಹೆಚ್ಚು ಪರಿಸರ ಸ್ನೇಹಿ ಮೂರ್ತಿಗಳನ್ನೇ ತಯಾರುತ್ತಿದ್ದಾರೆ. ಇದೀಗ ಬೆಲ್ಲದ (Jaggery) ಗಣಪನ ಮೂರ್ತಿಯನ್ನು ಸಕ್ಕರೆನಾಡು ಮಂಡ್ಯದಲ್ಲಿದಲ್ಲಿ ತಯಾರಿಸಿ ಈಗ ಬೆಲ್ಲದ ಗಣಪನದ್ದೇ ಹವಾ. ಬೆಲ್ಲದಿಂದ ತಯಾರಾದ ಗಣಪನಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದೆ.
ಮಂಡ್ಯ ಅಂದ್ರೆ ಬರಿ ಸಕ್ಕರೆನಾಡಲ್ಲಾ. ಮಂಡ್ಯ ಬೆಲ್ಲಕ್ಕೂ ಈಗ ಸಾಕಷ್ಟು ಬೇಡಿಕೆ ಇದೆ. ಈಗ ಮಂಡ್ಯ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪನನ್ನ ತಯಾರು ಮಾಡಲಾಗ್ತಿದೆ. ಕೆಮಿಕಲ್ ಇಲ್ಲದ ಪಕ್ಕಾ ಪರಿಸರ ಸ್ನೇಹಿ ಬೆಲ್ಲದ ಗಣಪನನ್ನ ತಯಾರು ಮಾಡಿದ್ದಾರೆ.
ಕಡಿಮೆ ಖರ್ಚಿನಲ್ಲಿ ತಯಾರು: ಮಂಡ್ಯದ ವಿಕಾಸನ ಸಂಸ್ಥೆಯ ಸಹಯೋಗದೊಂದಿಗೆ ಹಳುವಾಡಿ ಗ್ರಾಮದ ತಮ್ಮಯ್ಯ ಎಂಬುವವರು ತಮ್ಮ ಹಾಲೆ ಮನೆಯಲ್ಲಿ ಗಣೇಶನ ಮೂರ್ತಿಗಳನ್ನ ತಯಾರು ಮಾಡ್ತಿದ್ದಾರೆ. ಸುಮಾರು 2 ಅಡಿ ಎತ್ತರದಷ್ಟು ಗಣೇಶ ಮೂರ್ತಿ ಹಾಗೂ ಅರ್ಧ ಅಡಿ ಎತ್ತರದಷ್ಟು ಗೌರಿ ಮೂರ್ತಿಗಳನ್ನ ಸಹ ತಯಾರು ಮಾಡಲಾಗ್ತಿದೆ. ಈ ಗಣೇಶ ಮೂರ್ತಿ ಅತಿ ಕಡಿಮೆ ಖರ್ಚಿನಲ್ಲಿ ತಯಾರು ಮಾಡಲಾಗ್ತಿದ್ದು, ಗಣೇಶ ಮೂರ್ತಿ ಕೊಂಡುಕೊಳ್ಳುವವರಿಗೂ ಇದು ಕೈಗೆಟುಕುವ ಬೆಲೆಗೆ ದೊರಕುತ್ತಿದೆ.
ಹಲವು ಜಿಲ್ಲೆಗಳಿಂದ ಬೇಡಿಕೆ : ಸದ್ಯ ಮಂಡ್ಯ ಬೆಲ್ಲದ ಗಣಪನಿಗೆ ರಾಜ್ಯದ ಹಲವು ಜಿಲ್ಲೆಗಳಿಂದ ಬೇಡಿಕೆ ಹೆಚ್ಚಾಗಿದೆ. ಅಲ್ಲದೆ ವಿಸರ್ಜನೆ ಸಂದರ್ಭದಲ್ಲಿ ಕೂಡ ನೀರಿಗೆ ಗಣಪನನ್ನ ಬಿಟ್ಟ ಬಳಿಕ ಬಹು ಬೇಗ ನೀರಿನಲ್ಲಿ ಗಣಪತಿ ಕರಗಲಿದೆ. ಹೀಗಾಗಿ ನೀವು ಕೂಡ ಈ ಬಾರಿ ಬೆಲ್ಲದ ಗಣಪತಿಗೆ ಜೈ ಎನ್ನುವ ಮೂಲಕ ಪರಿಸರಕ್ಕೆ ಹಾನಿಯೂಂಟು ಮಾಡುವ ಪಿಒಪಿ ಹಾಗೂ ವಿಷಕಾರಿ ಬಣ್ಣದ ಗಣಪನಿಗೆ ಗುಡ್ ಬೈ ಹೇಳಿ.
Source : Digital Media
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…