Advertisement
ಸುದ್ದಿಗಳು

#GaneshaFestival | ಇದು ಸಿಹಿ ಸಿಹಿ ಗಣಪತಿ | ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪ ತಯಾರಿ | ಪರಿಸರ ಸ್ನೇಹಿ ಬೆಲ್ಲದ ಗಣಪನಿಗೆ ಭಾರಿ ಬೇಡಿಕೆ |

Share

ಗಣೇಶ ಹಬ್ಬಕ್ಕೆ ಇನ್ನೇನು 2-3 ತಿಂಗಳು ಬಾಕಿ ಇರುವಾಗಲೇ ಗಣೇಶ ಮೂರ್ತಿ ತಯಾರಕರು ತಯಾರಿ ನಡೆಸುತ್ತಾರೆ. ಎಲ್ಲಿ ನೋಡಿದರಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನದ್ದೇ ಭರಾಟೆ. ಪರಿಸರ ಕಾಳಜಿ ಹಿನ್ನೆಲೆಯಲ್ಲಿ ಪಿಓಪಿ ಗಣೇಶ ಮೂರ್ತಿಗಳನ್ನು ಬ್ಯಾನ್‌ ಮಾಡಿದ್ರೂ, ಅದರ ಹಾವಳಿ ನಿಂತಿಲ್ಲ. ಆದರೆ ಇತ್ತೀಚೆಗೆ ಜನರೇ ಹೆಚ್ಚು ಪರಿಸರ ಸ್ನೇಹಿ ಗಣಪತಿ (Natural) ಮೂರ್ತಿಗಳ ಮೊರೆ ಹೋಗ್ತಿದ್ದಾರೆ. ಹಾಗಾಗಿ ತಯಾರಕರು ಹೆಚ್ಚು ಪರಿಸರ ಸ್ನೇಹಿ ಮೂರ್ತಿಗಳನ್ನೇ ತಯಾರುತ್ತಿದ್ದಾರೆ. ಇದೀಗ ಬೆಲ್ಲದ (Jaggery)  ಗಣಪನ ಮೂರ್ತಿಯನ್ನು  ಸಕ್ಕರೆನಾಡು ಮಂಡ್ಯದಲ್ಲಿದಲ್ಲಿ ತಯಾರಿಸಿ ಈಗ ಬೆಲ್ಲದ ಗಣಪನದ್ದೇ ಹವಾ. ಬೆಲ್ಲದಿಂದ ತಯಾರಾದ ಗಣಪನಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದೆ.

ಮಂಡ್ಯ ಅಂದ್ರೆ ಬರಿ ಸಕ್ಕರೆನಾಡಲ್ಲಾ. ಮಂಡ್ಯ ಬೆಲ್ಲಕ್ಕೂ ಈಗ ಸಾಕಷ್ಟು ಬೇಡಿಕೆ ಇದೆ. ಈಗ ಮಂಡ್ಯ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪನನ್ನ ತಯಾರು ಮಾಡಲಾಗ್ತಿದೆ. ಕೆಮಿಕಲ್ ಇಲ್ಲದ ಪಕ್ಕಾ ಪರಿಸರ ಸ್ನೇಹಿ ಬೆಲ್ಲದ ಗಣಪನನ್ನ ತಯಾರು ಮಾಡಿದ್ದಾರೆ.

ಕಡಿಮೆ ಖರ್ಚಿನಲ್ಲಿ ತಯಾರು: ಮಂಡ್ಯದ ವಿಕಾಸನ ಸಂಸ್ಥೆಯ ಸಹಯೋಗದೊಂದಿಗೆ ಹಳುವಾಡಿ ಗ್ರಾಮದ ತಮ್ಮಯ್ಯ ಎಂಬುವವರು ತಮ್ಮ ಹಾಲೆ ಮನೆಯಲ್ಲಿ ಗಣೇಶನ ಮೂರ್ತಿಗಳನ್ನ ತಯಾರು ಮಾಡ್ತಿದ್ದಾರೆ. ಸುಮಾರು 2 ಅಡಿ ಎತ್ತರದಷ್ಟು ಗಣೇಶ ಮೂರ್ತಿ ಹಾಗೂ ಅರ್ಧ ಅಡಿ ಎತ್ತರದಷ್ಟು ಗೌರಿ ಮೂರ್ತಿಗಳನ್ನ ಸಹ ತಯಾರು ಮಾಡಲಾಗ್ತಿದೆ. ಈ ಗಣೇಶ ಮೂರ್ತಿ ಅತಿ ಕಡಿಮೆ ಖರ್ಚಿನಲ್ಲಿ ತಯಾರು ಮಾಡಲಾಗ್ತಿದ್ದು, ಗಣೇಶ ಮೂರ್ತಿ ಕೊಂಡುಕೊಳ್ಳುವವರಿಗೂ ಇದು ಕೈಗೆಟುಕುವ ಬೆಲೆಗೆ ದೊರಕುತ್ತಿದೆ.

ಹಲವು ಜಿಲ್ಲೆಗಳಿಂದ ಬೇಡಿಕೆ : ಸದ್ಯ ಮಂಡ್ಯ ಬೆಲ್ಲದ ಗಣಪನಿಗೆ ರಾಜ್ಯದ ಹಲವು ಜಿಲ್ಲೆಗಳಿಂದ ಬೇಡಿಕೆ ಹೆಚ್ಚಾಗಿದೆ. ಅಲ್ಲದೆ ವಿಸರ್ಜನೆ ಸಂದರ್ಭದಲ್ಲಿ ಕೂಡ ನೀರಿಗೆ ಗಣಪನನ್ನ ಬಿಟ್ಟ ಬಳಿಕ ಬಹು ಬೇಗ ನೀರಿನಲ್ಲಿ ಗಣಪತಿ ಕರಗಲಿದೆ. ಹೀಗಾಗಿ ನೀವು ಕೂಡ ಈ ಬಾರಿ ಬೆಲ್ಲದ ಗಣಪತಿಗೆ ಜೈ ಎನ್ನುವ ಮೂಲಕ ಪರಿಸರಕ್ಕೆ ಹಾನಿಯೂಂಟು ಮಾಡುವ ಪಿಒಪಿ ಹಾಗೂ ವಿಷಕಾರಿ ಬಣ್ಣದ ಗಣಪನಿಗೆ ಗುಡ್ ಬೈ ಹೇಳಿ.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

6 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

6 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

14 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

22 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 days ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

2 days ago