Advertisement
MIRROR FOCUS

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

Share

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign) ಕಾರ್ಯ ನಡೆಯುತ್ತಿದೆ. ಬಿಜೆಪಿಯ(BJP) ಸ್ಟಾರ್‌ ಪ್ರಚಾರಕ(Star campaigner) ಹಾಗೂ ಪ್ರಧಾನಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ಪ್ರಚಾರ ಗೈಗೊಂಡಿದ್ದಾರೆ. ಬಿರು ಬಿಸಿಲಿನ ಮಧ್ಯೆಯೂ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಬಾಗಲಕೋಟೆಗೆ(Bagalakote) ಪ್ರಚಾರ ಕಾರ್ಯಕ್ಕಾಗಿ ಬಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾರತ ವಿಶ್ವದ ಟಾಪ್ 3ನೇ ಸ್ಥಾನಕ್ಕೆ ಏರಲಿದ್ದು, ಅದನ್ನು ನಿಮ್ಮ ಮತ ಮಾಡಲಿದೆ. ಈ ಬಾರಿಯ ಲೋಕಸಭಾ ಚುನಾವಣೆ(Lok sabha Election) ಆತ್ಮನಿರ್ಭರದ್ದಾಗಿದ್ದು, ಭಾರತದ(India) ಭವಿಷ್ಯವನ್ನು ನಿರ್ಧಾರ ಮಾಡಲಿದೆ ಎಂದು  ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವದ ಟಾಪ್ 3 ಸ್ಥಾನಕ್ಕೆ ಮೋಜು, ಮಸ್ತಿಯಲ್ಲಿ ಕಾಲ ಕಳೆಯುವವರು ಏರಿಸುವುದಿಲ್ಲ. ಒಂದು ಸಂಕಲ್ಪ ಮಾಡಿಕೊಂಡು 24*7 ಕೆಲಸ ಮಾಡಿದರೆ ಇದು ಸಾಧ್ಯವಾಗಲಿದೆ. ಈ ವಿಚಾರದಲ್ಲಿ ಮೋದಿಯ ಗಮನ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರದಲ್ಲಿ ಇದ್ದುಕೊಂಡು ದೇಶವನ್ನು ಕೊಳ್ಳೆ ಹೊಡೆಯುವವರಿಗೆ ನೀವು ಅಧಿಕಾರ ಕೊಡ್ತಿರಾ? ಈ ಕಾಂಗ್ರೆಸ್‍ನ (Congress) ಇತಿಹಾಸ ದೇಶವನ್ನು ಲೂಟಿ ಹೊಡೆಯುವುದೇ ಆಗಿದೆ. ಇಂತಹ ಲೂಟಿಕೋರರ ಕೈಯಲ್ಲಿ ದೇಶವನ್ನ ಕೊಡುತ್ತೀರಾ? ಕಾಂಗ್ರೆಸ್ ಕರ್ನಾಟಕವನ್ನು ಲೂಟಿಯ ಎಟಿಎಂ ಆಗಿ ಮಾಡಿಕೊಂಡಿದ್ದಾರೆ. ಅಧಿಕಾರ ಪಡೆದು ಇಷ್ಟು ಕಡಿಮೆ ಸಮಯದಲ್ಲೇ ಖಜಾನೆ ಲೂಟಿ ಹೊಡದಿದ್ದಾರೆ. ಇಲ್ಲಿನ ಸರ್ಕಾರಿ ನೌಕರರಿಗೆ ಸಂಬಳ ಕೂಡಲಾಗುತ್ತಿಲ್ಲ. ಜನರ ಹಿತಕ್ಕಾಗಿ ಒಂದು ಯೋಜನೆ ಇಲ್ಲ. ಕಾಂಗ್ರೆಸ್ ಬಂದ್ರೆ ದೇಶ ಹಾಳಾಗುತ್ತದೆ ಎಂದು ಇತಿಹಾಸ ಹೇಳುತ್ತದೆ ಎಂದು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ನಮ್ಮ ಸರ್ಕಾರ, ರೇಲ್ವೆ ನಿಲ್ದಾಣ ಮಾಡುತ್ತಿದೆ. ವಿಜಯಪುರದಲ್ಲಿ ವಿಮಾನ ನಿಲ್ದಾಣ ಮಾಡಲಾಗುತ್ತಿದೆ. ಹಿಂದಿನ 10 ವರ್ಷದಲ್ಲಿ ಮೋದಿ ಸರ್ಕಾರ ಬಡ ಜನರ ಪರ ಯೋಚಿಸಿದೆ. ಕಾಂಗ್ರೆಸ್‍ನವರು ಒಂದು ಕ್ಷಣದಲ್ಲಿ ಬಡತನ ನಿರ್ಮೂಲನೆ ಮಾಡುತ್ತೇವೆ ಅಂತಾರೆ, 70 ವರ್ಷದಿಂದ ಆಗದದ್ದನ್ನು ಈಗೇನು ಮಾಡ್ತೀರಾ ಎಂದು ಅವರು ಪ್ರಶ್ನಿಸಿದ್ದಾರೆ. ನಾನು ಪ್ರಧಾನಿ ಆಗುವ ಮೊದಲು 18 ಸಾವಿರ ಗ್ರಾಮಗಳ ಜನರು ಕಗ್ಗತ್ತಲಲ್ಲಿ ಜೀವಿಸುತ್ತಿದ್ದರು. ನನಗೆ ಅವಕಾಶ ಕೊಟ್ಟ ನಂತರ ಎಲ್ಲೆಡೆ ವಿದ್ಯುತ್ ಕೊಟ್ಟೆವು, ದೇಶದಲ್ಲಿ ಒಂದೇ ಒಂದು ವಿದ್ಯುತ್ ಇಲ್ಲದ ಗ್ರಾಮವಿಲ್ಲ. 75%ನಷ್ಟು ಜನರಿಗೆ ನೀರು ಕೊಡಲಾಗಿದೆ. ಈ ಮೊದಲು ಕಾಂಗ್ರೆಸ್ ಮಾಡಬಹುದಿತ್ತಲ್ಲಾ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಬಾಲಕಿ ಮೇಟಿ ರಚಿಸಿದ ಮೋದಿ ಹಾಗೂ ಅವರ ತಾಯಿಯ ಭಾವಚಿತ್ರವನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಲಾಯಿತು. ಇದಕ್ಕೆ ಪ್ರತಿಯಾಗಿ, ಮಗಳೇ ನಿನಗೆ ಪತ್ರ ಬರೆಯುತ್ತೇನೆ ಎಂದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

12 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago